Advertisement

G20 ಔತಣಕೂಟದಲ್ಲಿ ಭಾಗವಹಿಸುವುದಿಲ್ಲ…: ಎಚ್ ಡಿ ದೇವೇಗೌಡ

10:50 AM Sep 08, 2023 | keerthan |

ಬೆಂಗಳೂರು: ಜಿ20 ಶೃಂಗಸಭೆಯ ಅಂಗವಾಗಿ ಆಯೋಜಿಸಿರುವ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್ ಡಿ ದೇವೇಗೌಡ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಔತಣಕೂಟದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ.

Advertisement

ಆರೋಗ್ಯ ಕಾರಣದಿಂದ ಸೆ.9ರಂದು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಜಿ20 ಔತಣಕೂಟದಲ್ಲಿ ನಾನು ಭಾಗವಹಿಸುವುದಿಲ್ಲ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಿಳಿಸಿದ್ದೇನೆ. ಜಿ20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.

ಮನಮೋಹನ್ ಸಿಂಗ್ ಅವರು ಕೂಟದಲ್ಲಿ ಭಾಗಿಯಾಗುವ ಬಗ್ಗೆ ಇದುವರೆಗೆ ಖಚಿತಪಡಿಸಿಲ್ಲ. ಇದೇ ವೇಳೆ ಅಲ್ಲಿ ಸುಮಾರು 500 ಉದ್ಯಮಿಗಳು ಉಪಸ್ಥಿತರಿರುವ ನಿರೀಕ್ಷೆಯಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಔತಣಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜೆಡಿಎಸ್ ಮುಖ್ಯಸ್ಥ ನಿತೀಶ್ ಶನಿವಾರ ಬೆಳಗ್ಗೆ 10.45ಕ್ಕೆ ದೆಹಲಿಗೆ ತೆರಳಲಿದ್ದಾರೆ. ಜುಲೈ 2022 ರ ನಂತರ ಅವರ ಮೊದಲ ಭೇಟಿಯಾಗಲಿರುವ ಸಮಾರಂಭದಲ್ಲಿ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

Advertisement

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡಾ ಜಿ20 ಶೃಂಗಸಭೆ ಔತಣ ಕೂಟದಲ್ಲಿ ಭಾಗವಹಿಸಲಿದ್ದಾರೆ.

ದೆಹಲಿಯಲ್ಲಿ ಸೆಪ್ಟೆಂಬರ್ 9-10 ರಂದು ನಡೆಯಲಿರುವ ಜಿ20 ಶೃಂಗಸಭೆಯು ಯುಎಸ್, ಯುಕೆ, ಕೆನಡಾ ಮತ್ತು ಯುರೋಪಿಯನ್ ಯೂನಿಯನ್ ಸೇರಿದಂತೆ ವಿವಿಧ ದೇಶಗಳ ಉನ್ನತ ನಾಯಕರನ್ನು ಆಯೋಜಿಸಲು ಸಿದ್ಧವಾಗಿದೆ. ನೂತನವಾಗಿ ಉದ್ಘಾಟನೆಗೊಂಡ ಭಾರತ ಮಂಟಪದ ಪ್ರಗತಿ ಮೈದಾನದಲ್ಲಿ ಶೃಂಗಸಭೆ ನಡೆಯಲಿದ್ದು, ವಿದೇಶಿ ಪ್ರತಿನಿಧಿಗಳನ್ನು ಸ್ವಾಗತಿಸಲು ಅಲಂಕರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next