Advertisement

Article 370 ಮರುಸ್ಥಾಪಿಸುವವರೆಗೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಮೆಹಬೂಬಾ ಮುಫ್ತಿ

06:20 PM May 21, 2023 | Team Udayavani |

ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ಮರುಸ್ಥಾಪಿಸುವವರೆಗೆ ತಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮುಫ್ತಿ ಹೇಳಿದ್ದಾರೆ. ಆದರೆ, ಅವರ ಪಕ್ಷ ಪಿಡಿಪಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.

Advertisement

ಇಡೀ ದೇಶಕ್ಕೆ ಕರ್ನಾಟಕ ಭರವಸೆಯ ಕಿರಣವನ್ನು ನೀಡಿದೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಎಲ್ಲರೂ ಕರ್ನಾಟಕ ಚುನಾವಣೆಯಲ್ಲಿ ಧರ್ಮವನ್ನು ಬಳಸಿ ರಾಜಕಾರಣ ಮಾಡುತ್ತಿದ್ದರು ಆದರೆ ಜನರು ಅವರನ್ನು ಸೋಲಿಸಿದರು ಎಂದು ಹೇಳಿದರು.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಅಡಿಪಾಯ ಹಾಕಿತು ಎಂದು ಮುಫ್ತಿ ಅಭಿಪ್ರಾಯ ಪಟ್ಟರು.

“ಕಳೆದ ಐದು ವರ್ಷಗಳು ದ್ವೇಷ ಮತ್ತು ಕೋಮು ರಾಜಕಾರಣದಿಂದ ನಲುಗಿ ಹೋಗಿವೆ. ಕರ್ನಾಟಕದಲ್ಲಿಯೂ ವಿಭಜಕ ರಾಜಕಾರಣ ನಡೆದಿದೆ. ಈಗ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಗಾಯಗಳನ್ನು ವಾಸಿಮಾಡುತ್ತಾರೆ” ಎಂದು ಹೇಳಿದರು.

‘ವಿಭಜಕ ಮತ್ತು ಕೋಮುವಾದಿ ರಾಜಕೀಯ’ ದಿಂದ ಹೊಡೆದ ಮೊದಲ ರಾಜ್ಯ ಜಮ್ಮು ಮತ್ತು ಕಾಶ್ಮೀರವಾಗಿದೆ ಆದರೆ ಕರ್ನಾಟಕದ ಜನರು ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕಿದ್ದಾರೆ ಎಂದು ಮುಫ್ತಿ ಹೇಳಿದರು.

Advertisement

ತನ್ನ ರಾಜ್ಯದ ಬಗ್ಗೆ ಮಾತನಾಡುತ್ತಾ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಲಾಯಿತು, ಇದು ಫೆಡರಲಿಸಂಗೆ ಅತ್ಯುತ್ತಮ ಉದಾಹರಣೆಯಾಗಿದೆ, ಆದರೆ “ಭಾರತೀಯ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ರಾಜ್ಯವನ್ನು ಛಿದ್ರಗೊಳಿಸಲಾಯಿತು, ವಿಘಟಿತಗೊಳಿಸಲಾಯಿತು ಮತ್ತು ಅಧಿಕಾರವನ್ನು ಕಳೆದುಕೊಂಡಿತು” ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next