Advertisement

ದೆಹಲಿ ಪ್ರವಾಸದ ವೇಳೆ ಹೈಕಮಾಂಡ್ ಭೇಟಿಯಿಲ್ಲ; ಸಿಎಂ ಬೊಮ್ಮಾಯಿ

10:11 AM Apr 28, 2022 | Team Udayavani |

ಬೆಂಗಳೂರು: ಶುಕ್ರವಾರ ರಾತ್ರಿ ದೆಹಲಿಗೆ ಹೋಗುತ್ತಿದ್ದೇನೆ. ಎ.30 ರಂದು ಮುಖ್ಯಮಂತ್ರಿಗಳು ಹಾಗೂ ಸಿಜೆ ಕಾನ್ಫರೆನ್ಸ್ ಇದೆ. ಸದ್ಯಕ್ಕೆ ಯಾವುದೇ  ಹೈಕಮಾಂಡ್ ನಾಯಕರ ಭೇಟಿಗೆ ಸಮಯ ಕೇಳಿಲ್ಲ, ಈ ಬಗ್ಗೆ ಯೋಚನೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಆರ್ ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಡಿಜಿಪಿ ಅಮೃತ್ ಪಾಲ್ ವರ್ಗಾವಣೆ ಮಾಡಿರುವುದು ಸರ್ಕಾರ ಅಕ್ರಮ ಮಾಡಿರುವುದನ್ನ ಒಪ್ಪಿಕೊಂಡಂತಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ:ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕ ಅಕ್ರಮ: ಧಾರವಾಡ ಕುಲಸಚಿವ ನಾಗರಾಜ್‌ ಬಂಧನ

ನಾವು ಏನು ಮಾಡಿದರೂ ಕಾಂಗ್ರೆಸ್ ನವರು ಹೇಳುತ್ತಾರೆ. ಸುಮ್ಮನೆ ಬಿಟ್ಟರೆ ಯಾಕೆ ಬಿಟ್ರಿ ಎನ್ನುತ್ತಾರೆ, ತೆಗೆದರೆ ಯಾಕೆ ತೆಗೆದಿರಿ ಎನ್ನುತ್ತಾರೆ. ಅದಕ್ಕೆಲ್ಲಾ ಉತ್ತರ ಕೊಡಲು ಸಾಧ್ಯವೇ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next