Advertisement

Election ಗೆಲ್ಲೋವರೆಗೂ ವಿಧಾನಸೌಧದತ್ತ ಸುಳಿಯಲ್ಲ: ರೇಣುಕಾಚಾರ್ಯ

06:12 PM Feb 17, 2024 | Team Udayavani |

ಹೊನ್ನಾಳಿ: “ಸೋಲು-ಗೆಲುವು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿ ಹೊಂದಿದ್ದೇನೆ. ಸೋತಾಗ ಯಾವತ್ತೂ ವಿಧಾನಸೌಧದೊಳಗೆ ಹೋಗಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದು, ಗೆಲುವು ಸಾಧಿಸುವವರೆಗೂ ವಿಧಾನಸೌಧದ ಮೆಟ್ಟಿಲು ಹತ್ತುವುದಿಲ್ಲ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

Advertisement

ನವದೆಹಲಿಯ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್‌, ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ತಾಲೂಕು ಘಟಕದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

2004 ಮತ್ತು 2008ರಲ್ಲಿ ಸತತ ಎರಡು ಬಾರಿ ಗೆದ್ದ ಮೇಲೆ ನೆನಪುಳಿಯುವಂತಹ ಕೆಲಸ ಮಾಡಿದ್ದರೂ 2013ರ ಚುನಾವಣೆಯಲ್ಲಿ ಪರಾಭವಗೊಂಡೆ. ಆಮೇಲೆ ವಿಧಾನಸೌಧಕ್ಕೆ ತೆರಳದೆ ಕ್ಷೇತ್ರದಲ್ಲಿ ಸಂಚರಿಸಿ ಮತದಾರರ ವಿಶ್ವಾಸಗಳಿಸಿ 2018ರಲ್ಲಿ ಗೆಲುವು ಸಾಧಿಸಿ ಮೂರನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದೆ.

ಈಗಲೂ ಅದೇ ರೀತಿ ಜನರ ಸಂಕಷ್ಟಗಳಿಗೆ ಸ್ಪಂದಿಸಲು ತಾಲೂಕಿನಾದ್ಯಂತ ಸಂಚರಿಸುತ್ತಿದ್ದೇನೆ. ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next