Advertisement

ಪುನೀತ್ ರಾಜಕುಮಾರ್ ಹೆಸರಿನಲ್ಲಿ ಬಳ್ಳಾರಿಯಲ್ಲಿ ಶಾಲೆ ಆರಂಭ: ಜನಾರ್ಧನ ರೆಡ್ಡಿ

01:14 PM Nov 08, 2021 | Team Udayavani |

ಬಳ್ಳಾರಿ: ಇತ್ತೀಚೆಗೆ ಅಗಲಿದ ಕನ್ನಡ ಚಿತ್ರರಂಗದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಸೋಮವಾರ ಶ್ರದ್ಧಾಂಜಲಿ ಸಲ್ಲಿಸಿದರು.

Advertisement

ನಗರ ಹೊರವಲಯದ ಬೆಳಗಲ್ಲು ರಸ್ತೆಯಲ್ಲಿನ ರುಕ್ಮಿಣಮ್ಮಚೆಂಗಾರೆಡ್ಡಿ ಸ್ಮಾರಕ ಮೆಮೋರಿಯಲ್ ವೃದ್ಧಾಶ್ರಮದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ದಂಪತಿ ಮತ್ತು ಸಹೋದರ ನಗರ ಶಾಸಕ ಸೋಮಶೇಖರ ರೆಡ್ಡಿ ಅವರೊಂದಿಗೆ ಪುನೀತ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ಇದನ್ನೂ ಓದಿ:ಪ್ರಶಸ್ತಿಗಿಂತ ಅಪ್ಪು ವ್ಯಕ್ತಿತ್ವವೇ ದೊಡ್ಡದು: ನಟ ಚೇತನ್

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನ ರೆಡ್ಡಿ, ಬಳ್ಳಾರಿಯಲ್ಲಿ ಪುನೀತ್ ಹೆಸರಲ್ಲಿ ಶಾಲೆ ಆರಂಭ ಮಾಡಲಾಗುವುದು. ರಸ್ತೆ, ಪಾರ್ಕ್ ಗಳಿಗೆ ಪುನೀತ್ ಹೆಸರಿಡಲು ಸ್ಥಳೀಯ ಸಂಸ್ಥೆಗಳ ಗಮನ ಸೆಳೆಯಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next