Advertisement

ಸಿದ್ದರಾಮಯ್ಯನವರೇ ಎಲ್ಲರಿಗೂ ಲಸಿಕೆ ಕೊಡುತ್ತೇವೆ, ನಮಗೆ ಧಮ್ ಇದೆ: ಡಿಸಿಎಂ ಅಶ್ವಥ ನಾರಾಯಣ

04:27 PM Oct 24, 2020 | keerthan |

ಬೆಳಗಾವಿ: ಸಿದ್ದರಾಮಯ್ಯ ನವರೇ ನಮಗೆ ಧಮ್ ಇದೆ. ಎಲ್ಲರಿಗೂ ಕೋವ್ಯಾಕ್ಸಿನ್ ನೀಡುತ್ತೇವೆ.‌ ಆ ಧಮ್ ಇದೆ ಎಂದು ಡಿಸಿಎಂ ಡಾ.ಅಶ್ವಥ ನಾರಾಯಣ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದರು.

Advertisement

ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾವು ಎಲ್ಲರಿಗೂ ಕೋವಿಡ್-19 ವ್ಯಾಕ್ಸಿನ್ ನೀಡುತ್ತೇವೆ.‌ಇದರಲ್ಲಿ ಯಾವುದೇ ಸಂದೇಹ ಇಲ್ಲ. ಸಿದ್ದರಾಮಯ್ಯನವರು ಧಮ್ ಬಗ್ಗೆ ಮಾತನಾಡುವುದು ಸರಿಯಲ್ಲ. ನಮಗೆ ಧಮ್ ಇದೆ ಎಂದು ತಿರುಗೇಟು ನೀಡಿದರು.

ವಿಜಯಪುರ ಶಾಸಕ ಬಸವರಾಜ ಪಾಟಿಲ್ ಯತ್ನಾಳ ಅವರು ನಾಯಕತ್ವ ಬದಲಾವಣೆ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಈ ವಿಷಯದಲ್ಲಿ ರಾಜ್ಯಾಧ್ಯಕ್ಷರು ತೆಗೆದುಕೊಳ್ಳುವ ನಿರ್ಧಾರಕ್ಕೆ ಪಕ್ಷ ಬದ್ಧವಾಗಿದೆ ಎಂದರು. ಶಿಕ್ಷಣಕ್ಕಾಗಿ ವಿಶೇಷ ಆದ್ಯತೆ ನೀಡಿ ಹಿರೇಬಾಗೇವಾಡಿಯ ಗುಡ್ಡದಲ್ಲಿ ವಿವಿ ಸ್ಥಾಪನೆಗೆ ಸರಕಾರ ಮುಂದಾಗಿದೆ. ಇದರಲ್ಲಿ ಯಾರೂ ರಾಜಕೀಯ ಮಾಡುವುದು ಸರಿಯಲ್ಲ ಎಂದರು.

ಇದನ್ನೂ ಓದಿ:ಉಪಚುನಾವಣೆ: ಸಿದ್ದರಾಮಯ್ಯ ಸವಾಲು ಸ್ವೀಕರಿಸಲು ಸಿದ್ಧ ಎಂದ ಸಚಿವ ಈಶ್ವರಪ್ಪ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಹಿರೇಬಾಗೇವಾಡಿಯಲ್ಲಿಯೇ ಸ್ಥಾಪಿಸಲು ಸರ್ಕಾರ ನಿರ್ಧರಿಸಿದ್ದು ಮೊದಲ ಹಂತದಲ್ಲಿ ನೂರು ಕೋಟಿ ರೂಪಾಯಿ ಒದಗಿಸಲಾಗುವುದು. ಈಗಾಗಲೇ 127 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಇಲ್ಲಿ ಅಕಾಡೆಮಿಕ್ ಮತ್ತು ಆಡಳಿತ ಕೇಂದ್ರ ಎರಡೂ ಕಾರ್ಯನಿರ್ವಹಿಸಲಿವೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next