Advertisement

ಸಿಎಂ ಕೇಳಿದರೆ ರಾಜೀನಾಮೆ ನೀಡುವೆ: ಸಚಿವ ಜಾರ್ಜ್‌

07:30 AM Sep 09, 2017 | Team Udayavani |

ಬೆಂಗಳೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸೂಚಿಸಿದರೆ ಮಾತ್ರ ರಾಜೀನಾಮೆ ನೀಡುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹೆಣದ ಮುಂದೆ ರಾಜಕಾರಣ ಮಾಡುತ್ತಾರೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿತ್ತು. ನಾನು ಸಚಿವನಾಗಿದ್ದರೆ, ಸಿಐಡಿ ಅಧಿಕಾರಿಗಳಿಗೆ ಮುಕ್ತವಾಗಿ ತನಿಖೆಗೆ ಅವಕಾಶ ದೊರೆಯುವುದಿಲ್ಲ ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದೆ. ಸಿಐಡಿ ತನಿಖೆಯಲ್ಲಿ ನನ್ನ ಯಾವುದೇ ಪಾತ್ರ ಇಲ್ಲ ಎಂದು ವರದಿ ಬಂದಿದೆ ಎಂದು ಹೇಳಿದರು.

ನಾನು ಯಾವತ್ತೂ ಕುರ್ಚಿಗೆ ಅಂಟಿಕೊಂಡವನಲ್ಲ. ರಾಜಕೀಯ ಹಿನ್ನೆಲೆ ಇಲ್ಲದೇ ಬಂದ ನನಗೆ ಇಷ್ಟು ಎತ್ತರಕ್ಕೆ ಬೆಳೆಯಲು ಕಾಂಗ್ರೆಸ್‌ ಕಾರಣ. ಬಿಜೆಪಿಯವರು ಜನಸಂಘ ಕಾಲದಿಂದ ಇಂದಿನವರೆಗೂ ನನ್ನ ವಿರುದ್ಧ ಹೋರಾಟ ಮಾಡುತ್ತಲೇ ಬಂದಿದ್ದಾರೆ. ನಾನು ಜನರನ್ನು ಒಡೆಯುವ ಕೆಲಸ ಮಾಡಿಲ್ಲ. ಎಲ್ಲರನ್ನೂ ಸೇರಿಸುವ ಕೆಲಸ ಮಾಡಿದ್ದೇನೆ ಎಂದು ಜಾರ್ಜ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next