Advertisement

ಎಲ್ಲದಕ್ಕೂ ನಾಗ್ಪುರದಲ್ಲೇ ಉತ್ತರಿಸುವೆ: ಪ್ರಣಬ್‌

06:00 AM Jun 03, 2018 | Team Udayavani |

ಕೋಲ್ಕತಾ: ಆರೆಸ್ಸೆಸ್‌ನ ಸಂಘ ಶಿಕ್ಷಾ ವರ್ಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಭುಗಿಲೆದ್ದಿರುವ ವಿರೋಧಕ್ಕೆ ತಾವು ಶಿಬಿರದ ವೇದಿಕೆಯಲ್ಲೇ ಉತ್ತರ ನೀಡುವುದಾಗಿ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ತಿಳಿಸಿದ್ದಾರೆ. 

Advertisement

ಇದೇ ತಿಂಗಳ 7ರಂದು ನಾಗ್ಪುರದಲ್ಲಿ ನಡೆಯಲಿರುವ ಶಿಬಿರದ ಸಮಾರೋಪದಲ್ಲಿ ಪಾಲ್ಗೊಳ್ಳಲು ಪ್ರಣಬ್‌ ಒಪ್ಪಿಕೊಂಡಿರುವುದನ್ನು ಕಾಂಗ್ರೆಸ್‌ನ ಜೈರಾಂ ರಮೇಶ್‌, ಸಿ.ಕೆ. ಜಾಫ‌ರ್‌ ಶರೀಫ್, ಕೇರಳದ ವಿಪಕ್ಷ ನಾಯಕ ರಮೇಶ್‌ ಚೆನ್ನಿತಾಲ ಸೇರಿದಂತೆ ಅನೇಕ ಹಿರಿಯ ನಾಯಕರು ಆಕ್ಷೇಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “”ಶಿಬಿರದಲ್ಲಿ ಪಾಲ್ಗೊಳ್ಳುವ ನಿರ್ಧಾರ ಮರುಪರಿಶೀಲಿಸಬೇಕೆಂದು ಕಾಂಗ್ರೆಸ್‌ನ ಹಲವಾರು ಹಿರಿಯ ನಾಯಕರು ಪತ್ರಗಳು, ದೂರವಾಣಿ ಕರೆಗಳ ಮೂಲಕ ಮನವಿ ಮಾಡಿದ್ದಾರೆ. ಆದರೆ, ನಾನು ಯಾವುದಕ್ಕೂ ಪ್ರತಿಕ್ರಿಯಿಸಿಲ್ಲ. ಏನಿದ್ದರೂ ನಾಗ್ಪುರದಲ್ಲೇ ಪ್ರತಿಕ್ರಿಯಿಸುತ್ತೇನೆ” ಎಂದು ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next