Advertisement

ಬಚಾವಾಗಲು ರೋಷನ್‌ ಬೇಗ್‌ ಬರ್ತಾರಾ?

11:42 PM Jul 12, 2019 | Team Udayavani |

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರೋಷನ್‌ಬೇಗ್‌ ಅವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರನ್ನು ಗುರುವಾರ ರಾತ್ರಿ ಹೋಟೆಲ್‌ನಲ್ಲಿ ಭೇಟಿಯಾಗಿ ಚರ್ಚಿಸಿದ್ದು, ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಸರ್ಕಾರದ ಪರ ಮತ ಹಾಕಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

Advertisement

ರಾಜೀನಾಮೆ ಅಂಗೀಕಾರವಾಗದೆ ಇರುವುದರಿಂದ ತಾಂತ್ರಿಕವಾಗಿ ಅವರು ಶಾಸಕರೇ ಆಗಿದ್ದಾರೆ. ಒಂದೊಮ್ಮೆ ಅಗತ್ಯ ಬಿದ್ದರೆ ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಸಹ ವಾಪಸ್‌ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ತಮ್ಮ ಮೇಲಿನ ಹಗರಣ ಆರೋಪ ಕುರಿತ ತನಿಖೆ ಸಂಬಂಧ ಬಚಾವಾಗಲು ಸರ್ಕಾರದ ಪರ ಮತ ಹಾಕಲಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಅವರಿಗೆ ಸಮ್ಮಿಶ್ರ ಸರ್ಕಾರ ಕಡೆಯಿಂದಲೂ ಒತ್ತಡಗಳಿದ್ದವು ಎಂಬ ಮಾತೂ ಕೇಳಿಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next