Advertisement

“2022ರೊಳಗೆ ಟೆರರಿಸಂ, ನಕ್ಸಲಿಸಂ, ಕಾಶ್ಮೀರ ಸಮಸ್ಯೆ ಬಗೆಹರಿಸ್ತೇವೆ”

11:30 AM Aug 19, 2017 | Team Udayavani |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಕಠಿಣ ಗುರಿಯನ್ನು ತಲುಪಲು ಮುಂದಾಗಿದೆ. ನವ ಭಾರತ ನಿರ್ಮಾಣದ ಹಿನ್ನೆಲೆಯಲ್ಲಿ 2022ರ ವೇಳೆಗೆ ಭಯೋತ್ಪಾದನೆ, ನಕ್ಸಲಿಸಂ ಹಾಗೂ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವುದಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಘೋಷಿಸಿದ್ದಾರೆ.

Advertisement

ದೇಶದಲ್ಲಿ ಹಲವು ಸಮಸ್ಯೆಗಳು ತಾಂಡವವಾಡುತ್ತಿದೆ. ಅದರಲ್ಲಿ ಭಯೋತ್ಪಾದನೆ, ನಕ್ಸಲಿಸಂ, ಕಾಶ್ಮೀರ ಸಮಸ್ಯೆ ಪ್ರಮುಖವಾದದ್ದು. ಈ ಸಮಸ್ಯೆ ಬಗ್ಗೆ ಹೆಚ್ಚು ಹೇಳಬೇಕಾದ ಅಗತ್ಯವಿಲ್ಲ. ಆದರೆ ನಾನು ನಿಮಗೆ ಭರವಸೆ ನೀಡುತ್ತಿದ್ದೇನೆ, 2022ರ ವೇಳೆಗೆ ಈ ಎಲ್ಲಾ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.

ಭಯೋತ್ಪಾದನೆ, ನಕ್ಸಲಿಸಂ ಹಾಗೂ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವ ಮೂಲಕ ನವ ಭಾರತವನ್ನು ನಿರ್ಮಿಸಬೇಕಾಗಿದೆ. ಆ ನಿಟ್ಟಿನಲ್ಲಿ 2022ರೊಳಗೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಪಿಟಿಐ ಜತೆ ಮಾತನಾಡುತ್ತ ಸಿಂಗ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next