Advertisement

ಅಮಿತ್ ಶಾ ರಾಜ್ಯ ಭೇಟಿಯ ವೇಳೆ ಸಂಪುಟ ವಿಸ್ತರಣೆ ಚರ್ಚೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ

11:07 AM Apr 29, 2022 | Team Udayavani |

ಬೆಂಗಳೂರು: ಇಂದಿನ ದೆಹಲಿ ಪ್ರವಾಸದಲ್ಲಿ ಯಾವುದೇ ಕೇಂದ್ರ ಸಚಿವರು ಹಾಗೂ ಪಕ್ಷದ ನಾಯಕರನ್ನು ಭೇಟಿ ಮಾಡುವುದಿಲ್ಲ. ಆದರೆ ಅಮಿತ್ ಶಾ ಮೇ.3ರಂದು  ರಾಜ್ಯಕ್ಕೆ ಬಂದಾಗ ಸಂಪುಟದ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಖಾಲಿ ಇರುವ ಸಚಿವ ಸ್ಥಾನ ತುಂಬುವ ಬಗ್ಗೆ ವರಿಷ್ಠರ ಗಮನಕ್ಕೆ ತರಲಾಗಿದೆ. ಹೀಗಾಗಿ ಅಮಿತ್ ಶಾ ಬಂದಾಗ ಈ‌ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.

ಇದನ್ನೂ ಓದಿ:ಸದ್ಯದಲ್ಲೇ 6ರಿಂದ 12 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ ಆರಂಭ: ಸಚಿವ ಸುಧಾಕರ್

ಇಂದು ಸಂಜೆ ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ಜಡ್ಜ್ ಗಳು, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗಿಯಾಗುತ್ತೇನೆ. ನಂತರ ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಬರುತ್ತೇನೆ ಎಂದು ಸಿಎಂ ಮಾಹಿತಿ ನೀಡಿದರು.

ಆಕಾಂಕ್ಷಿಗಳ ಭೇಟಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಭೇಟಿ ಮುಂದುವರಿದಿದೆ.

Advertisement

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ನೆಹರು ಓಲೇಕಾರ ಆರ್ ಟಿ ನಗರದ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next