Advertisement

ಅಗತ್ಯ ಬಿದ್ದರೆ ಮಹಾರಾಷ್ಟ್ರ ಸರ್ಕಾರದ ಜೊತೆ ಮಾತನಾಡುತ್ತೇವೆ: ಬೆಳಗಾವಿಯಲ್ಲಿ ಸಿಎಂ

02:34 PM Dec 18, 2021 | Team Udayavani |

ಬೆಳಗಾವಿ: ಬೆಳಗಾವಿಯಲ್ಲಿ ಸರ್ಕಾರದ ವಾಹನಗಳು ಸೇರಿ ಹಲವು ವಾಹನಗಳ ಮೇಲೆ ದಾಳಿ ನಡೆಸಿದ್ದು ಕಾನೂನು ಬಾಹಿರ. ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬಹುದು ಅದನ್ನು ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಅಧಿಕಾರಿಗಳು ಅಲ್ಲಿನ ಅಧಿಕಾರಿಗಳ ಜೊತೆ ಮಾತನಾಡಿ ಸೂಕ್ತ ಕ್ರಮ ತೆಗೆದುಕೊಳ್ತಾರೆ. ಅಗತ್ಯ ಬಿದ್ದರೆ ನಂತರ ನಮ್ಮ ಸರ್ಕಾರ ಅಲ್ಲಿನ ಸರ್ಕಾರದ ಜೊತೆ ಮಾತಾಡುತ್ತೇವೆ ಎಂದರು.

ಇಲ್ಲಿ ಪೊಲೀಸರ ವೈಫಲ್ಯ ಏನೂ ಇಲ್ಲ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ದಾಳಿ, ಹಲ್ಲೆ ವಿಚಾರ ಅಲ್ಲಿನ ಸರ್ಕಾರದ ಜವಾಬ್ದಾರಿ. ಎರಡೂ ರಾಜ್ಯಗಳ ಗೃಹ ಕಾರ್ಯದರ್ಶಿಗಳು ಮೊದಲು ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡುತ್ತಾರೆ. ನಂತರ ಅವಶ್ಯಕತೆ ಬಿದ್ದರೆ ನಾನು ಮಾತಾಡುತ್ತೇನೆ ಎಂದರು.

ಇದನ್ನೂ ಓದಿ:ಸಂಗೊಳ್ಳಿ ರಾಯಣ್ಣ, ಶಿವಾಜಿ ಪ್ರತಿಮೆ ಹಾನಿಗೆ ಸಚಿವರ ಖಂಡನೆ, ಕಾನೂನು ಕ್ರಮದ ಎಚ್ಚರಿಕೆ

ನಿನ್ನೆ ರಾತ್ರಿ ಕೆಲವು ಪುಂಡರು ಈ ರೀತಿ ದಾಳಿ ಮಾಡಿದ್ದಾರೆ. ರಾತ್ರಿ ಹೊತ್ತು ಬಂದು ವಾಹನಗಳನ್ನು ಒಡೆಯುವುದು ದೊಡ್ಡ ಪುರುಷಾರ್ಥಾವೇ ಎಂದು ಸಿಎಂ ಬೊಮ್ಮಾಯಿ ಪ್ರಶ್ನಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next