Advertisement

ಮದ್ಯದಂಗಡಿಗಳನ್ನು ಗೋಶಾಲೆಗಳಾಗಿ ಪರಿವರ್ತಿಸಿ: ಬಿಜೆಪಿ ನಾಯಕಿ ಉಮಾ ಭಾರತಿ

11:42 AM Feb 01, 2023 | Team Udayavani |

ಭೋಪಾಲ್: ಮಧ್ಯಪ್ರದೇಶದ ಮದ್ಯದ ಅಂಗಡಿಗಳನ್ನು ಗೋಶಾಲೆಗಳಾಗಿ ಪರಿವರ್ತಿಸ ಬೇಕು ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕಿ ಉಮಾಭಾರತಿ ಅವರು ಒತ್ತಾಯಿಸಿದ್ದಾರೆ.

Advertisement

ಮಹಿಳೆಯರ ವಿರುದ್ಧದ ಅಪರಾಧಗಳ ಹೆಚ್ಚಳಕ್ಕೆ ಮದ್ಯ ಸೇವನೆಯೇ ಕಾರಣ ಎಂದು ಉಮಾ ಭಾರತಿ ಹೇಳಿದರು.

ಭೋಪಾಲ್‌ ನ ದೇವಸ್ಥಾನವೊಂದರಲ್ಲಿ ತನ್ನ ನಾಲ್ಕು ದಿನಗಳ ವಾಸ್ತವ್ಯವನ್ನು ಕೊನೆಗೊಳಿಸಿದ ಉಮಾ ಭಾರತಿ, ರಾಜ್ಯದಲ್ಲಿ ನಿಯಂತ್ರಿತ ಮದ್ಯ ನೀತಿಯ ಬೇಡಿಕೆಯನ್ನು ಬೆಂಬಲಿಸುವ ಸಲುವಾಗಿ ‘ಮಧುಶಾಲಾ ಮೇ ಗೌಶಾಲಾ’ (ಮದ್ಯ ಮಾರಾಟ ಕೇಂದ್ರ ಸ್ಥಳದಲ್ಲಿ ಗೋಶಾಲೆಗಳು) ಕಾರ್ಯಕ್ರಮವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು.

ಮದ್ಯದ ನೀತಿಗೆ ಕಾಯದೆ, ನಿಯಮ ಉಲ್ಲಂಘಿಸಿ ನಡೆಸುತ್ತಿರುವ ಮದ್ಯದಂಗಡಿಗಳನ್ನು ಗೋಶಾಲೆಗಳನ್ನಾಗಿ ಪರಿವರ್ತಿಸಲು ಮುಂದಾಗುತ್ತೇನೆ ಎಂದರು.

ಇದನ್ನೂ ಓದಿ:ಈ ಬಜೆಟ್ ಪ್ರತಿಯೊಂದು ವರ್ಗದ ನಿರೀಕ್ಷೆ ಪೂರೈಸುತ್ತದೆ: ಕೇಂದ್ರ ಸಚಿವ

Advertisement

ಓರ್ಚಾದಲ್ಲಿರುವ ಅಕ್ರಮ ಮದ್ಯದ ಅಂಗಡಿಯ ಹೊರಗೆ 11 ಹಸುಗಳನ್ನು ಹಾಕಲು ವ್ಯವಸ್ಥೆ ಮಾಡುವಂತೆ ಜನರಿಗೆ ತಿಳಿಸಿದ್ದೇನೆ ಎಂದು ಉಮಾ ಭಾರತಿ ಹೇಳಿದರು.

“ನನ್ನನ್ನು ತಡೆಯಲು ಯಾರು ಧೈರ್ಯ ಮಾಡುತ್ತಾರೆ ಎಂಬುದನ್ನು ನೋಡುತ್ತೇವೆ. ಈ ಹಸುಗಳಿಗೆ ಆಹಾರ ಮತ್ತು ನೀರು ಮದ್ಯದ ಅಂಗಡಿಯಲ್ಲಿ ಕೊಡುತ್ತಾರೆ” ಎಂದು ಮಾಜಿ ಕೇಂದ್ರ ಸಚಿವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next