Advertisement

ಕಾಂಗ್ರೆಸ್‌ನ್ನೇ ಬೆಂಬಲಿಸುವೆ: ರಮೇಶ್‌ ಜಾರಕಿಹೊಳಿ

12:45 AM Mar 12, 2019 | Team Udayavani |

ಬೆಂಗಳೂರು: ನಾನು ಕಾಂಗ್ರೆಸ್‌ ಪಕ್ಷವನ್ನೇ ಬೆಂಬಲಿಸುತ್ತೇನೆ, ಬಿಜೆಪಿಗೆ ಸೇರುವುದಿಲ್ಲ. ಇದು ಪಕ್ಷದ ನಾಯಕರ ವಿರುದ್ದ ಬಂಡಾಯವೆದ್ದು, ಈಗಲೂ ಅಂತರ ಕಾಯ್ದುಕೊಂಡಿರುವ ಗೋಕಾಕ್‌ ಶಾಸಕ, ರಮೇಶ್‌ ಜಾರಕಿಹೊಳಿ ನೀಡಿದ ಸ್ಪಷ್ಟನೆ.

Advertisement

ಸೋಮವಾರ ಬೆಂಗಳೂರಿನ ಸದಾಶಿವನಗರದ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸುತ್ತೇನೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಪರವಾಗಿಯೇ ಕೆಲಸ ಮಾಡುತ್ತೇನೆ. ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವುದನ್ನು ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರುವುದಿಲ್ಲಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next