Advertisement

ನಿಯಮ ಉಲ್ಲಂಘಿಸಿ ಪಾದಯಾತ್ರೆ ಮಾಡುವವರ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ

11:07 AM Jan 10, 2022 | Team Udayavani |

ಬೆಂಗಳೂರು: ಕಾನೂನು ಉಲ್ಲಂಘನೆ ಮಾಡುವವರ ಮೇಲೆ ಕೇಸ್ ದಾಖಲಾಗುತ್ತದೆ. ಪಾದಯಾತ್ರೆ ಮಾಡುವರ ಮೇಲೆ ‌ಕೇಸ್ ದಾಖಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸ್ ರಿಜಿಸ್ಟರ್ ನಲ್ಲಿ ಏನೆಲ್ಲಾ ಆಗಬೇಕೋ ಅದು ಆಗುತ್ತೆ. ಇದರಲ್ಲಿ ಯಾವುದೇ ಬೇಧಭಾವವಿಲ್ಲ. ಎಷ್ಟೇ ದೊಡ್ಡ ನಾಯಕನಿರಲಿ, ಸಾಮಾನ್ಯ ಜನ ಇರಲಿ. ಏನು ಆಗಬೇಕು ಎದು ಆಗುತ್ತದೆ ಎಂದರು.

ಇದನ್ನೂ ಓದಿ:ಭಾರತ; 7,00,000 ಲಕ್ಷದ ಗಡಿ ದಾಟಿದ ಸಕ್ರಿಯ ಕೋವಿಡ್ ಪ್ರಕರಣ, ಒಮಿಕ್ರಾನ್ 4,033ಕ್ಕೆ ಏರಿಕೆ

ಸ್ವಾಬ್ ಟೆಸ್ಟ್ ವೇಳೆ ಅಧಿಕಾರಿಗಳ ವಿರುದ್ಧ ಡಿಕೆ ಶಿವಕುಮಾರ್ ಗರಂ ಆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವು ಅವರ ಆರೋಗ್ಯದ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ. ಅವರು ಸುದೀರ್ಘವಾಗಿ ನಡೆದ ಸಂದರ್ಭದಲ್ಲಿ ಅವರ ಆರೋಗ್ಯ ತಪಾಸಣೆ ಮಾಡಬೇಕು. ಅವರೊಬ್ಬರಿಗೆಲ್ಲ ಎಲ್ಲರಿಗೂ ಆರೋಗ್ಯ ತಾಪಸಣೆ ಮಾಡಬೇಕು. ಇದು ಆರೋಗ್ಯ ಇಲಾಖೆ ಕರ್ತವ್ಯ ಮತ್ತು ಔದಾರ್ಯ. ಇದನ್ನು ಅರ್ಥ ಮಾಡಿಕೊಳ್ಳದೆ ಬಾಯಿಗೆ ಬಂದ ಹಾಗೆ ಮಾತನಾಡಿದ್ದಾರೆ. ಕಾನೂನು ಪಾಲನೆ ಮಾಡದರಿಗೆ ಕ್ರಮ ಕೈಗೊಳ್ಳಲು ವಿಫಲವಾಗುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next