Advertisement

ಕೋವಿಡ್ ಕ್ರಮಗಳ ಬಗ್ಗೆ ಗುರುವಾರ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ: ಸಿಎಂ ಬೊಮ್ಮಾಯಿ

10:22 AM Jan 03, 2022 | Team Udayavani |

ಬೆಂಗಳೂರು: ಒಮಿಕ್ರಾನ್ ಮತ್ತು ಕೋವಿಡ್ 19 ಸೋಂಕು ಸಂಖ್ಯೆ ಹೆಚ್ಚಾಗುತ್ತಿದ್ದು, ಗುರುವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮತ್ತು ಒಮಿಕ್ರಾನ್ ಪ್ರಕರಣಗಳನ್ನು ಗಮನಿಸುತ್ತಿದ್ದೇವೆ. ಅಕ್ಕಪಕ್ಕದ ರಾಜ್ಯಗಳಲ್ಲಿ ವೇಗವಾಗಿ ಹರಡುತ್ತಿದೆ. ನಾಳೆ ಸಾಯಂಕಾಲ ತಜ್ಞರ ಜೊತೆ ಸಭೆ ಮಾಡುತ್ತೇವೆ ಎಂದರು.

ಇದನ್ನೂ ಓದಿ:ಜನರ ಹಿತದೃಷ್ಟಿಯಿಂದ ಮೇಕದಾಟು ಪಾದಯಾತ್ರೆ ಕೈ ಬಿಡಿ: ಕಾಂಗ್ರೆಸ್ ಗೆ ಸಚಿವ ಸೋಮಶೇಖರ್ ಮನವಿ

ಸೋಂಕು ತಡೆಗಟ್ಟಲು ಬೇಕಾದ ವರದಿಯನ್ನು ತಜ್ಞರಿಂದ ಕೇಳಿದ್ದೇವೆ. ಗುರುವಾರ ಕ್ಯಾಬಿನೆಟ್ ನಲ್ಲಿ ಒಟ್ಟಾರೆ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿ ಒಂದಿಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಸಿಎಂ ವಿವರಿಸಿದರು.

Koo App

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next