Advertisement

ಸಂಪುಟ ವಿಸ್ತರಣೆಗಾಗಿ ಇಂದು ದೆಹಲಿಯವರ ಜತೆ ಮಾತುಕತೆ: ಸಿಎಂ ಯಡಿಯೂರಪ್ಪ

11:15 AM Nov 29, 2020 | keerthan |

ಚಿತ್ರದುರ್ಗ: ಮುಂದಿನ ಎರಡು ಅಥವಾ ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಆಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

Advertisement

ಚಿತ್ರದುರ್ಗ ಮುರುಘಾ ಮಠದಲ್ಲಿ ನಿರ್ಮಿಸಿರುವ ಮುರುಘಾ ಶ್ರೀ ಪ್ರಾಚ್ಯವಸ್ತು ಸಂಗ್ರಹಾಲಯ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದರು.

ಸಂಪುಟ ವಿಸ್ತರಣೆ ಸಂಬಂಧ ಇಂದು ದೆಹಲಿಯವರ ಜತೆ ಮಾತನಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ:ಕುರುಬ ಸಮಾಜಕ್ಕೆ ಎಸ್.ಟಿ.ಮೀಸಲು ನೀಡದಿದ್ದರೆ ಸಚಿವರು, ಶಾಸಕರು ಪದತ್ಯಾಗಕ್ಕೂ ಸಿದ್ಧ

ಇದೇ ವೇಳೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ರೈತರು ಮನವಿ ಮಾಡಿದರು. ಈ ಸಂಬಂಧ ಕೆಎಂಎಫ್ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಎಂದು ಒತ್ತಾಯಿಸಿದರು.

Advertisement

ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಎಂ. ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ನಿಗಮ‌ ಮಂಡಳಿ ಅಧ್ಯಕ್ಷರಾದ ಎಸ್. ಲಿಂಗಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬದರೀನಾಥ್ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next