Advertisement

ನಾಲಗೆ … : ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಗೆ Congress ನಾಯಕನ ಬೆದರಿಕೆ

08:19 PM Apr 07, 2023 | Team Udayavani |

ನವದೆಹಲಿ : 2019 ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಗೆಯನ್ನು ಪಕ್ಷ ಅಧಿಕಾರಕ್ಕೆ ಬಂದಾಗ ಕತ್ತರಿಸುವುದಾಗಿ ತಮಿಳುನಾಡಿನ ಕಾಂಗ್ರೆಸ್ ನಾಯಕರೊಬ್ಬರು ಬೆದರಿಕೆ ಹಾಕಿದ್ದು, ಹೇಳಿಕೆಗಾಗಿ ಪ್ರಕರಣ ದಾಖಲಾಗಿದೆ.

Advertisement

ಕಾಂಗ್ರೆಸ್‌ನ ಎಸ್‌ಸಿ/ಎಸ್‌ಟಿ ವಿಭಾಗ ತಮಿಳುನಾಡಿನ ದಿಂಡಿಗಲ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಅನರ್ಹತೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಪಕ್ಷದ ಜಿಲ್ಲಾ ಮುಖ್ಯಸ್ಥ ಮಣಿಕಂದನ್ “ಮಾರ್ಚ್ 23 ರಂದು ಸೂರತ್ ನ್ಯಾಯಾಲಯದ ನ್ಯಾಯಾಧೀಶರು ನಮ್ಮ ನಾಯಕನಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ನೀಡಿದರು.  ನ್ಯಾಯಮೂರ್ತಿ ಎಚ್ ವರ್ಮಾ ಅವರೇ ನಮ್ಮ ಮಾತನ್ನು ಆಲಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ನಾವು ನಿಮ್ಮ ನಾಲಗೆಯನ್ನು ಕತ್ತರಿಸುತ್ತೇವೆ” ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಮಣಿಕಂದನ್ ವಿರುದ್ಧ ಮೂರು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ದಿಂಡಿಗಲ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next