Advertisement

ಉಕ್ರೇನಿನಿಂದ ವಿದ್ಯಾರ್ಥಿಗಳನ್ನು ಕರೆತರಲು ಸರ್ವ ವ್ಯವಸ್ಥೆ: ಸಿ.ಸಿ. ಪಾಟೀಲ್‌

09:27 PM Mar 03, 2022 | Team Udayavani |

ಬೆಂಗಳೂರು:  ಯುದ್ದಪೀಡಿತ ಉಕ್ರೇನಿನಲ್ಲಿ  ಬಾಗಲಕೋಟೆ ಜಿಲ್ಲೆಯ ಒಟ್ಟು 21 ವಿದ್ಯಾರ್ಥಿಗಳು ಈ ತಾಯ್ನಾಡಿಗೆ ಮರಳುವ ಪ್ರಯತ್ನದಲ್ಲಿ ಸುರಕ್ಷಿತವಾಗಿದ್ದಾರೆ. ಅವರನ್ನು ಉಕ್ರೇನ್‌ ಗಡಿಯಿಂದಾಚೆಯಿಂದ ಪೋಲೆಂಡ್‌, ಹಂಗೇರಿ, ರೊಮೇನಿಯಾ ಮತ್ತಿತರ ಕಡೆಗಳಿಂದ ಭಾರತಕ್ಕೆ ಕರೆತರುವ ಪ್ರಯತ್ನ ಕೇಂದ್ರ ಸರಕಾರದಿಂದ ನಿರಂತರವಾಗಿ ಮುಂದುವರೆದಿದ್ದು, ಈಗಾಗಲೇ ಜಿಲ್ಲೆಯ ಪ್ರಜ್ವಲ ಘಟ್ಟದ ಎಂಬ ವಿದ್ಯಾರ್ಥಿಯು ಉಕ್ರೇನಿನಿಂದ ಕರ್ನಾಟಕಕ್ಕೆ ತಲುಪಿದ್ದಾರೆ. ಇತರ ಎಲ್ಲ ಕನ್ನಡಿಗರೂ ಸುರಕ್ಷಿತವಾಗಿ ತಾಯ್ನಾಡಿಗೆ ಮರಳುವ ವಿಶ್ವಾಸವಿದೆ ಎಂದು ಲೋಕೋಪಯೋಗಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದರು.

Advertisement

ಜಿಲ್ಲಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳೊಂದಿಗೆ ಗುರುವಾರ ವಿಡಿಯೋ ಕಾನ್ಪರೇನ್ಸ್‌  ಮೂಲಕ ಸಭೆ ನಡೆಸಿದ ಬಳಿಕ ಪತ್ರಿಕಾ ಹೇಳಿಕೆ ನೀಡಿರುವ ಅವರು ಜಿಲ್ಲೆಯಿಂದ ಉಕ್ರೇನಿಗೆ ವಿದ್ಯಾಭ್ಯಾಸಕ್ಕೆ ತೆರಳಿದ್ದ ಒಟ್ಟು 21 ವಿದ್ಯಾರ್ಥಿಗಳ ಪಟ್ಟಿಯನ್ನು ತಯಾರು ಮಾಡಿ ರಾಜ್ಯ ಮತ್ತು ಕೇಂದ್ರ ಸರಕಾರಗಳಲ್ಲಿ ರಚಿಸಲಾದ ಸಹಾಯಕೇಂದ್ರಗಳ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಅದರಂತೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಪರಸ್ಪರ ಸೂಕ್ತ ಸಂಯೋಜನೆಯಿಂದ ಕೆಲಸ ಮಾಡುತ್ತಾ ಎಲ್ಲ ವಿದ್ಯಾರ್ಥಿಗಳನ್ನು ಇಲ್ಲಗೆ ಕರೆತರುವ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮರಳಿದ ವಿದ್ಯಾರ್ಥಿಯೊಂದಿಗೆ ಮಾತನಾಡಿದ ಸಿ.ಸಿ.ಪಾಟೀಲ:

ಉಕ್ರೇನಿನಿಂದ ಗುರುವಾರ ರಾಜ್ಯಕ್ಕೆ ತಲುಪಿರುವ ಬಾಗಲಕೋಟೆ ಜಿಲ್ಲೆಯ ಕೆರೂರಿನ ಪ್ರಜ್ವಲ್‌ ಘಟ್ಟದ ಅವರೊಂದಿಗೆ ಖುದ್ದಾಗಿ ದೂರವಾಣಿಯಲ್ಲಿ ಮಾತನಾಡಿದ ಸಿ.ಸಿ.ಪಾಟೀಲರು ಆತನ ಯೋಗಕ್ಷೇಮವನ್ನು ವಿಚಾರಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ಈಗಾಗಲೇ ಪ್ರಜ್ವಲ್‌ ಸುರಕ್ಷಿತವಾಗಿ ತಾಯ್ನಾಡಿಗೆ ತಲುಪಿರುವುದು ನಮಗೆಲ್ಲ ಅತ್ಯಂತ ಸಂತಸ ತಂದಿದೆ.  ಪ್ರಜ್ವಲ್‌ ಜೊತೆ ಮಾತನಾಡಿದಾಗ ಆತ ತಾನು ತಾಯ್ನಾಡಿಗೆ ಹೆಚ್ಚಿನ ಆತಂಕವಿಲ್ಲದೇ ಮರಳುವಂತಾಗಿರುವದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರ ಮತ್ತು ಪ್ರಯಾಣಕ್ಕೆ ವಿಶೇಷ ವಿಮಾನದ ವ್ಯವಸ್ಥೆ ಕಾರಣವಾಯಿತು. ಇದಕ್ಕಾಗಿ ಆತ ಧನ್ಯವಾದ ಅರ್ಪಿಸಿದ್ದಾರೆ ಎಂದು ತಿಳಿಸಿದ್ದಾರೆ.

ಉಕ್ರೇನ್ನಲ್ಲಿ ಸಂಕಷ್ಟ ಅನುಭವಿಸುತ್ತಿರುವ ಜಿಲ್ಲೆಯ ವ್ಯಕ್ತಿಗಳಿಗೆ ಜಿಲ್ಲಾಡಳಿತವು ನೆರವಾಗಲು ವಿಶೇಷ ಸಹಾಯ ಕೇಂದ್ರ ಸ್ಥಾಪಿಸಿದ್ದು, ಜಿಲ್ಲೆಯ ಸಹಾಯವಾಣಿ ನಂ.08354-235512, 08354-235990 ಆಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳ ಪಾಲಕರನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಿಸಲು ಈಗಾಗಲೇ ಜಿಲ್ಲಾಡಳಿತದಿಂದ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅವರು ಈಗಾಗಲೇ ಬಹುತೇಕ ಎಲ್ಲ ಪಾಲಕರನ್ನು ಖುದ್ದಾಗಿ ಭೇಟಿಯಾಗಿದ್ದಾರೆ. ಉಳಿದ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರವು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ ಪಾಲಕರು ಯಾವುದೇ ಆತಂಕಕ್ಕೊಳಗಾಗಬಾರದೆಂದು ಸಿ.ಸಿ.ಪಾಟೀಲ ಮನವಿ ಮಾಡಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next