Advertisement

ಮುಂದಿನ ಚುನಾವಣೆಯಲ್ಲಿ 140 ರಿಂದ 150 ಸ್ಥಾನ ಗೆಲ್ಲುತ್ತೇವೆ: ಯಡಿಯೂರಪ್ಪ ವಿಶ್ವಾಸ

12:52 PM Jan 07, 2023 | Team Udayavani |

ಶಿವಮೊಗ್ಗ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140 ರಿಂದ 150 ಸ್ಥಾನ ಗೆಲ್ಲುವುದನ್ನು ತಡೆಯಲು ಯಾರಿಂದಲೂ ಸಾಧ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರು ಹೇಳಿದರು.

Advertisement

ಶಿಕಾರಿಪುರದಲ್ಲಿ‌ ಬಿಜೆಪಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ದೊಡ್ಡ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಯಾರೋ ನಾನೇ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಎಂದು ಬಡಿದಾಡುತ್ತಿದ್ದಾರೋ ಅದು ಕೇವಲ ತಿರುಕನ ಕನಸಾಗುತ್ತದೆ ಹೊರತು ಅದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎನ್ನುವುದು ಅವರಿಗೂ ಸಹ ಮನವರಿಕೆ ಆಗಿದೆ ಎಂದರು.

ಇದನ್ನೂ ಓದಿ:16ನೇ ಏಷಿಯನ್‌ ಫಿಲ್ಮ್‌ ಅವಾರ್ಡ್ಸ್‌: ಭಾರತದಿಂದ ನಾಮಿನೇಟ್‌ ಆದದ್ದು 2 ಸಿನಿಮಾಗಳು ಮಾತ್ರ

ಪ್ರಧಾನಿ ನರೇಂದ್ರ ಮೋದಿಯವರಂತವರ ನಾಯಕತ್ವ ನಮಗಿರಬೇಕಾದರೇ ಈ ಚುನಾವಣೆಯಲ್ಲಿ ಜಯಭೇರಿ ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ. ಎಲ್ಲಾ ಕಾರ್ಯಕರ್ತರು ಬೂತ್ ಬಲ ಪಡಿಸಿ ಮತದಾರರನ್ನು ಮನವಲಿಸಿ ಮತಗಟ್ಟೆಗೆ ಕರೆದುಕೊಂಡು ಬಂದು ಮತದಾನ ಮಾಡಿಸಬೇಕಿದೆ ಎಂದರು.

ಸಿದ್ದರಾಮಯ್ಯನವರಿಗೆ ತಾವು ನಿಂತಿರುವ ನೆಲವೇ ಕುಸಿಯುತ್ತಿದೆ ಎನ್ನುವ ಅರಿವಿಲ್ಲದೆ ಬಹಳ ಹಗುರವಾಗಿ ಮುಖ್ಯಮಂತ್ರಿಗಳ ಬಗ್ಗೆ, ಆರ್ ಎಸ್ಎಸ್ ಬಗ್ಗೆ ಮಾತನಾಡುವ ಅಭ್ಯಾಸವಾಗಿದೆ. ಇದಕ್ಕೆ ತಕ್ಕಪಾಠವನ್ನು ರಾಜ್ಯದ ಜನ ಕಲಿಸುತ್ತಾರೆ ಎಂದರು.

Advertisement

2-3 ದಿನದಲ್ಲಿ ಸಂಪುಟ ವಿಸ್ತರಣೆ: ಮುಂದಿನ ಎರಡ್ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಕುರಿತು ಕೇಂದ್ರದಲ್ಲಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಯಾರನ್ನು ತೆಗೆದುಕೊಳ್ಳಬೇಕು ಎನ್ನುವುದು ಪ್ರಧಾನಿ,ಕೇಂದ್ರದ ನಾಯಕರಿಗೆ ಬಿಟ್ಟಿದ್ದು ಎಮದು ಬಿಎಸ್ ವೈ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next