Advertisement

15 ಕ್ಷೇತ್ರಗಳಲ್ಲಿ ಗೆಲುವು ಗ್ಯಾರಂಟಿ: ವೈ.ಎಸ್‌.ವಿ.ದತ್ತಾ

06:55 AM Apr 30, 2019 | Lakshmi GovindaRaju |

ಕಡೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ 15 ಕ್ಷೇತ್ರಗಳಲ್ಲಿ ಗೆಲುವು ಸಾ ಧಿಸಲಿದೆ ಎಂದು ಮಾಜಿ ಶಾಸಕ ಮತ್ತು ಜೆಡಿಎಸ್‌ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವೈ.ಎಸ್‌.ವಿ ದತ್ತಾ ಭವಿಷ್ಯ ನುಡಿದಿದ್ದಾರೆ.

Advertisement

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಟ್ಟಾಗಿ ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಿರುವುದು ಮೈತ್ರಿ ಕೂಟದ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಗೆಲುವು ಖಚಿತ. ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಜ್ವಲ್‌ ಅವರಿಗೆ ಅತಿ ಹೆಚ್ಚಿನ ಮತ ಲಭಿಸುವ ಸಾಧ್ಯತೆ ಇದೆ. ಈ ಕ್ಷೇತ್ರದಲ್ಲಿ ಕೋಮುವಾದಿ ಶಕ್ತಿ ಮಣಿಸಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ಗಳು ಸಂಘಟನಾತ್ಮಕವಾಗಿ ಹೋರಾಟ ಮಾಡಿ ಚುನಾವಣೆ ಎದುರಿಸಿವೆ.

ಶಿವಮೊಗ್ಗ, ಬ್ರಹ್ಮಾವರ, ಉಡುಪಿ, ಬೈಂದೂರು ಸೇರಿ ತಾವು ಚುನಾವಣಾ ಪ್ರಚಾರ ಮಾಡಿದ ಸಂದರ್ಭದಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳ ಪರವಾದ ವಾತಾವರಣ ಹೆಚ್ಚಾಗಿ ಕಂಡು ಬಂತು. ಕಾಂಗ್ರೆಸ್‌ 10 ಮತ್ತು ಜೆಡಿಎಸ್‌ 4 ರಿಂದ 5 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next