Advertisement

ಡಿ.7ರಿಂದ ಚಳಿಗಾಲದ ಅಧಿವೇಶನ! ಬೆಳಗಾವಿ ಬದಲು ಬೆಂಗಳೂರಿಗೆ ಶಿಫ್ಟ್ !

12:12 PM Nov 18, 2020 | sudhir |

ಬೆಂಗಳೂರು : ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು ಡಿಸೆಂಬರ್ 7 ರಿಂದ 15ರ ವರೆಗೆ ಅಧಿವೇಶನ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಹೇಳಿದ್ದಾರೆ.

Advertisement

ಈ ಬಾರಿ ಅಧಿವೇಶನವನ್ನು ಬೆಳಗಾವಿಯ ಬದಲಾಗಿ ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಬುಧವಾರ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಡೆದ ಸಂಪುಟ ಸಭೆಯಲ್ಲಿ ಕೆಲವೊಂದು ನಿರ್ಧಾರಗಳನ್ನು ಕೈಗೊಂಡಿದ್ದು ವಿಜಯನಗರ ಹೊಸ ಜಿಲ್ಲೆ ರಚನೆಗೆ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಜೊತೆಗೆ ಮರಾಠಾ ಸಮುದಾಯ ನಿಗಮ ಸ್ಥಾಪನೆಗೆ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದ್ದು, ಪ್ರಾಧಿಕಾರ ರಚನೆಯನ್ನು ಸರಕಾರ ಕೈಬಿಟ್ಟಿದೆ.

ಸಿಎಂ ದೆಹಲಿಗೆ ಪ್ರಯಾಣ :
ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸಲು ಹೈಕಮಾಂಡ್ ಭೇಟಿ ಮಾಡಲು ಮುಖ್ಯಮಂತ್ರಿ ದೆಹಲಿಗೆ ತೆರಳಿದರು, ದೆಹಲಿಯಿಂದ ಬಂದ ಬಳಿಕ ಸಂಪುಟ ಪುನಾರಚನೆ ನಡೆಯಲಿದ್ದು ಯಾರು ಯಾರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬುದು ಕಾದುನೋಡಬೇಕಾಗಿದೆ.

ಇದನ್ನೂ ಓದಿ:ಮುಂದಿನ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಮಾಡೇ ಮಾಡುತ್ತೇವೆ: ಸಚಿವ ಪ್ರಭು ಚವ್ಹಾಣ

Advertisement
Advertisement

Udayavani is now on Telegram. Click here to join our channel and stay updated with the latest news.

Next