Advertisement

ವಿವಿಧ ಬೇಡಿಕೆಗಾಗಿ ನಗರದಲ್ಲಿ ಸರಣಿ ಪ್ರತಿಭಟನೆ

12:38 PM Mar 11, 2017 | |

ಕುಲಸಚಿವ ಪ್ರೊ.ರಾಜಣ್ಣ ವಜಾಕ್ಕೆ ಒತ್ತಾಯ
ಮೈಸೂರು:
ದುರಾಡಳಿತ ನಡೆಸುತ್ತಿರುವ ಮೈಸೂರು ವಿವಿ ಕುಲಸಚಿವ ಪ್ರೊ.ಆರ್‌.ರಾಜಣ್ಣ ಅವರನ್ನು ಸೇವೆಯಿಂದ ವಜಾಗೊಳಿಸಿ, ಅವರ ಅಕ್ರಮಗಳ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಒಕ್ಕೂಟದ ಸದಸ್ಯರು ಶುಕ್ರವಾರ ಮಾನಸಗಂಗೋತ್ರಿ ರೌಂಡ್‌ಕಾಂಟೀನ್‌ ಬಳಿ ಪ್ರತಿಭಟನೆ ನಡೆಸಿದರು.

Advertisement

ಮೈಸೂರು ವಿವಿ ಕುಲಸಚಿವರಾಗಿ ನೇಮಕಗೊಂಡ ದಿನದಂದಲೂ ದಲಿತ ವರ್ಗದ ಮೇಲೆ ಪಿತೂರಿ ನಡೆಸುತ್ತಿದ್ದು, ಇದಕ್ಕೆ ಪೂರಕವೆಂಬಂತೆ ರಾಜಣ್ಣ ಅವರು ಕುಲಸಚಿವರಾಗಿ ನೇಮಕಗೊಂಡ ಸಂದರ್ಭದಲ್ಲಿ ತಮ್ಮ ಕಾರ್ಯಾಲಯದಲ್ಲಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರ ತೆರವುಗೊಳಿಸಿ ಅಪಮಾನ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ವಿವಿಧ ಘೋಷಣೆಗಳನ್ನು ಕೂಗಿದರು.

ಇನ್ನೂ ವಿವಿಯಲ್ಲಿ ಸಾಕಷ್ಟು ದುರಾಡಳಿತ ನಡೆಸಿರುವ ರಾಜಣ್ಣ ಅವರು, ಯಾವುದೇ ಪತ್ರಿಕಾ ಪ್ರಕಟಣೆ ಇಲ್ಲದೆ, ಮೀಸಲಾತಿ ನಿಯಮ ಅನುಸರಿಸದೇ ಜ.10, 2017ರಂದು ಸುಮಾರು 200ಕ್ಕೂ ಹೆಚ್ಚು ಬೋಧಕೇತರ ಸಿಬ್ಬಂದಿಗಳನ್ನು ನೇಮಿಸಿಕೊಂಡಿದ್ದಾರೆ. 2007ರಲ್ಲಿ ಕಾಯಂಗೊಂಡಿರುವ 32 ಉಪ ನ್ಯಾಸಕರು, ಸಹಾಯಕ ಪ್ರಾಧ್ಯಾಪಕರಿಗೆ ಹೊಸ ಪಿಂಚಣಿ ಸೌಲಭ್ಯದ ಬದಲು 2006ರ ಹಿಂದಿನ ಹಳೆಯ ಪಿಂಚಣಿ ಸೌಲಭ್ಯ ನೀಡಿ ಆದೇಶ ಹೊರಡಿಸಿ ಅಕ್ರಮ ಎಸಗಿದ್ದಾರೆ.

ರಾಜ್ಯಪಾಲರ ಆದೇಶವನ್ನು ಧಿಕ್ಕರಿಸಿ ಒಂದು ತಿಂಗಳು ಕಳೆದರೂ ಕಳೆದ ಸಿಂಡಿಕೇಟ್‌ ಸಭೆ ನಡಾವಳಿಯನ್ನು ಉದ್ದೇಶಪೂರ್ವಕವಾಗಿ ತಡೆ ಹಿಡಿದಿ ದ್ದಾರೆ. ಸರ್ಕಾರ ಕೂಡಲೇ ರಾಜಣ್ಣ ಅವರನ್ನು ಸೇವೆಯಿಂದ ವಜಾಗೊಳಿಸಿ, ಅವರ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ನಟರಾಜು ಶಿವಣ್ಣ, ಉಪಾಧ್ಯಕ್ಷ ವಿನೋದ್‌ ಎಸ್‌.ದಲಿತ್‌, ಗೌರವಾಧ್ಯಕ್ಷ ಮಹೇಶ್‌ ಸೋಸ್ಲೆ, ಗೌರವ ಸಲಹೆಗಾರ ಗುರುಮೂರ್ತಿ, ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್‌, ಕಾರ್ಯಾಧ್ಯಕ್ಷರಾದ ಸಿದ್ದಪ್ಪಾಜಿ, ಪ್ರಸಾದ್‌, ಸಂಘಟನಾ ಕಾರ್ಯದರ್ಶಿಗಳಾದ ಕುಕೀಲ್‌ರಾಜ್‌, ಚೇತನ್‌ ಮುಂತಾದವರು ಭಾಗವಹಿಸಿದ್ದರು.

Advertisement

ರೈತ, ಕಾರ್ಮಿಕ ಬೇಡಿಕೆಗಳ ಈಡೇರಿಕೆಗೆ ಸಿಪಿಐ ಪ್ರತಿಭಟನೆ 
ಮೈಸೂರು:
ರೈತರ ಸಾಲ ಮನ್ನಾ ಸೇರಿದಂತೆ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್‌ ಪಕ್ಷದ ಕಾರ್ಯಕರ್ತರು ಗಾಂಧಿಚೌಕದಲ್ಲಿ ಪ್ರತಿಭಟನೆ ನಡೆಸಿದರು.ಬರಗಾಲದಿಂದ ರೈತರು ಕಂಗಾಲಾಗಿದ್ದು,  ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ  ಸಮಸ್ಯೆ ಎದುರಾಗಿದೆ.  

ಅಪನಗದೀ ಕರಣದಿಂದಾಗಿ ರೈತರಿಗೆ ಅಂದಾಜು 25 ಸಾವಿರ ಕೋಟಿ ರೂ. ನಷ್ಟವಾಗಿದೆ. ಆದರೂ ಕೇಂದ್ರ, ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿಲ್ಲ. ಮಕೇಂದ್ರ ಸರ್ಕಾರ ಅಂಗನವಾಡಿ, ಬಿಸಿಯೂಟ, ಆಶಾ ಇತ್ಯಾದಿ ಕೇಂದ್ರದ ಯೋಜನೆ ಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಜಾರಿಗೊಳಿಸಿಲ್ಲ.ರಾಜ್ಯ ಸರ್ಕಾರ ನಿಗದಿ ಮಾಡಿರುವ 10,500 ರೂ. ಕನಿಷ್ಠ ವೇತನವನ್ನು ಕಾರ್ಮಿಕರಿಗೆ ನೀಡುತ್ತಿಲ್ಲ.

ಸರ್ಕಾರ ನಿಗದಿಗೊಳಿಸಿರುವ ಮಾಸಿಕ 18 ಸಾವಿರವನ್ನು ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಜಾರಿಗೊಳಿಸಬೇಕು. ಸರೋಜಿನಿ ಮಹಿಷಿ ವರದಿಗೆ ಪರಿಷ್ಕೃತ ಶಿಫಾರಸು ಮಾಡಿರುವ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಸಮಿತಿ ವರದಿಯನ್ನು ಅಂಗೀಕರಿಸಬೇಕು. ಕಾರ್ಮಿಕ ಇಲಾಖೆಯಲ್ಲಿ ಶೇ.35 ಹುದ್ದೆಗಳು ಖಾಲಿ ಇದ್ದು ಇದರ ನೇಮಕಕ್ಕೆ ಮುಂದಾಗಬೇಕು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ಕಾರ್ಯದರ್ಶಿ ಎಚ್‌.ಆರ್‌.ಶೇಷಾದ್ರಿ, ಸಹ ಕಾರ್ಯದರ್ಶಿ ಎಚ್‌.ಬಿ.ರಾಮಕೃಷ್ಣ ಇತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next