Advertisement

ಒಂದೇ ವಾರದಲ್ಲಿ ಇಬ್ಬರು ಬಿಜೆಪಿ ನಾಯಕರ ಹತ್ಯೆ

12:31 AM Jan 21, 2019 | Team Udayavani |

ಬರ್ವಾನಿ: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಬೆಳಗ್ಗೆ ವಾಕಿಂಗ್‌ಗೆಂದು ಹೋಗಿದ್ದ ಬಿಜೆಪಿ ನಾಯಕ ಮನೋಜ್‌ ಠಾಕ್ರೆ(48) ಅವರು ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಅವರನ್ನು ಕೊಲೆ ಮಾಡಿ ರಸ್ತೆ ಬದಿಯ ಹೊಲವೊಂದರಲ್ಲಿ ಬಿಸಾಕಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಮಂಡ್‌ಸಾರ್‌ನಲ್ಲಿ ಬಿಜೆಪಿ ನಾಯಕ ಪ್ರಹ್ಲಾದ್‌ ಬಂಧವಾರ್‌ ಎಂಬವರನ್ನು ಗುಂಡಿಕ್ಕಿ ಹತ್ಯೆಗೈದ ಮೂರೇ ದಿನದಲ್ಲಿ ಈ ಘಟನೆ ನಡೆದಿದ್ದು, ರಾಜ್ಯದಲ್ಲಿನ ಕಾಂಗ್ರೆಸ್‌ ಸರಕಾರವು ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋ ಪಿಸಿದೆ. ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌, “ಬಿಜೆಪಿ ನಾಯ ಕರನ್ನು ಒಬ್ಬೊಬ್ಬರನ್ನಾಗಿ ಹತ್ಯೆ ಮಾಡಲಾಗುತ್ತಿದೆ. ಆದರೂ, ಕಾಂಗ್ರೆಸ್‌ ಸರಕಾರಇದನ್ನು ಲಘುವಾಗಿ ಪರಿಗಣಿಸಿದೆ. ಪ್ರಸಕ್ತ ಸರಕಾರದ ಅಡಿ ಕಾನೂನು ಸುವ್ಯವಸ್ಥೆ ಕೆಳಮಟ್ಟಕ್ಕೆ ಇಳಿದಿದೆ. ಕೂಡಲೇ ತಪ್ಪಿತಸ್ಥರನ್ನು ಬಂಧಿಸಬೇಕು. ಇಲ್ಲದಿದ್ದರೆ ಬಿಜೆಪಿ ಬೀದಿ ಗಿಳಿದು ಹೋರಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ. ತನಿಖೆಗಾಗಿ ಹೆಚ್ಚುವರಿ ಎಸ್‌ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿ ಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next