Advertisement

Telangana: ನಿದ್ದೆಗೆ ಜಾರಿದ ಚಾಲಕ.. ಬಸ್ ಪಲ್ಟಿಯಾಗಿ ಹೊತ್ತಿಕೊಂಡ ಬೆಂಕಿ, ಮಹಿಳೆ ಸಜೀವ ದಹನ

12:18 PM Jan 13, 2024 | Team Udayavani |

ಆಂಧ್ರಪ್ರದೇಶ: ಚಿತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಓರ್ವ ಮಹಿಳಾ ಪ್ರಯಾಣಿಕರೊಬ್ಬರು ಸಜೀವ ದಹನಗೊಂಡ ಘಟನೆ ಶನಿವಾರ ತೆಲಂಗಾಣದ ಜೋಗುಲಾಂಬ ಗದ್ವಾಲ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಪೊಲೀಸರ ಪ್ರಕಾರ, ಶನಿವಾರ ಮುಂಜಾನೆ 3 ಗಂಟೆಗೆ ಖಾಸಗಿ ಬಸ್ಸು ಹೈದರಾಬಾದ್‌ನಿಂದ ಚಿತ್ತೂರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಬಸ್ಸಿನಲ್ಲಿ ಸುಮಾರು ನಲ್ವತ್ತು ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು ಈ ವೇಳೆ ಚಾಲಕ ನಿದ್ದೆಗೆ ಜಾರಿದ ಪರಿಣಾಮ ಬಸ್ಸು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ವೇಳೆ ಡೀಸೆಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ ಉಳಿದ ಪ್ರಯಾಣಿಕರು ಬಸ್ಸಿನಿಂದ ಇಳಿದರೆ ಓರ್ವ ಮಹಿಳೆಯ ಕೈ ಬಸ್ಸಿನ ಅಡಿ ಭಾಗದಲ್ಲಿ ಸಿಲುಕಿದ್ದ ಪರಿಣಾಮ ಬಸ್ಸಿಂದ ಹೊರ ಬರಲು ಸಾಧ್ಯವಾಗದೆ ಬೆಂಕಿ ಹೊತ್ತಿಕೊಂಡು ಸಜೀವ ದಹನಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತಪಟ್ಟ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

Advertisement

Advertisement

Udayavani is now on Telegram. Click here to join our channel and stay updated with the latest news.

Next