Advertisement

Bellary; ದರ್ಶನ್‌ ರನ್ನು ನೋಡಬೇಕು, ಅವರನ್ನು ಮದುವೆಯಾಗುತ್ತೇನೆಂದು ಪಟ್ಟು ಹಿಡಿದ ಮಹಿಳೆ

11:39 AM Sep 05, 2024 | Team Udayavani |

ಬಳ್ಳಾರಿ: ನಗರದ ಕೇಂದ್ರ ಕಾರಗೃಹದಲ್ಲಿ ಸೆರೆಯಾಗಿರುವ ಆರೋಪಿ ನಟ ದರ್ಶನ್ (Darshan) ನೋಡಬೇಕು, ಅವರ ಜತೆ ಒಂದೆರಡು ಮಾತನಾಡಬೇಕು ಎಂದು ಮಹಿಳಾ ಅಭಿಮಾನಿಯೊಬ್ಬರು ಪಟ್ಟು ಹಿಡಿದ ಘಟನೆ ಜೈಲಿನ ಎದುರು ನಡೆದಿದೆ.

Advertisement

ಕಲಬುರಗಿ ಮೂಲದ ಬೆಂಗಳೂರಿನ ಆರ್ ಆರ್ ನಗರ ನಿವಾಸಿ ಲಕ್ಷ್ಮೀ ಎನ್ನುವ ಮಹಿಳೆ ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಗುರುವಾರ ಬೆಳಗ್ಗೆ ಆಗಮಿಸಿ, ನಟ ದರ್ಶನ್ ಅವರನ್ನು ನೊಡಲೇ ಬೇಕು ಅಂತಾ ಹಠ ಹಿಡಿದು, ಜೈಲು ಸಿಬ್ಬಂದಿ ಜೊತೆ ವಾಗ್ವಾದಕ್ಕಿಳಿದಿದ್ದಾರೆ. ಈ ವೇಳೆ ಜೈಲಿನ ಭದ್ರತಾ ಸಿಬ್ಬಂದಿ ದರ್ಶನ್ ನೋಡಲು ಸಂಬಂಧಿಗಳಿಗೆ ಮಾತ್ರ ಅವಕಾಶವಿದೆ ಎಂದು ತಿಳಿಸುತ್ತಿದ್ದಂತೆ ನಾನು ದರ್ಶನ್ ಅವರನ್ನು ಮದುವೆ ಆಗುವುದಕ್ಕೂ ಸಿದ್ಧವಾಗಿ ಬಂದಿರುವೆ ಎಂದಿದ್ದಾಳೆ.

ವಿಜಯಲಕ್ಷ್ಮಿ ರೀತಿ ನಾನೂ ಮದುವೆಯಾಗುತ್ತೇನೆ. ನನಗೆ ದರ್ಶನ್ ಅಂದರೆ ಇಷ್ಟ. ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಹೋದರೂ ಅಲ್ಲೂ ಬಿಡಲಿಲ್ಲ. ಈಗ ಇಲ್ಲಿಗೆ ಬಂದಿರುವೆ. ನಟ ದರ್ಶನ್ ಅವರಿಗೆ ಹಣ್ಣು ಕೊಟ್ಟು ನೋಡಿ ಹೊಗುವೆ ಎಂದು ಪಟ್ಟು ಹಿಡಿದಿದ್ದ ಲಕ್ಷ್ಮೀ ಅವರನ್ನು ಕೊನೆಗೆ ಜೈಲಿನ ಸಿಬ್ಬಂದಿ ಮನವೊಲಿಸಿ ವಾಪಾಸ್ ಕಳುಹಿಸಿದ್ದಾರೆ.

ವಿಜಯಲಕ್ಷ್ಮಿ ಭೇಟಿ

Advertisement

ರೇಣುಕಾಸ್ವಾಮಿ ಕೊಲೆ ಪ್ರಕರಣದ ಜಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ ದರ್ಶನ್ ಭೇಟಿಗೆ ಇಂದು (ಸೆ.05) ಪತ್ನಿ ವಿಜಯಲಕ್ಷ್ಮಿ ಬರುತ್ತಿದ್ದಾರೆ. ಸಂಜೆ 4.30ಕ್ಕೆ ಬರುವುದಾಗಿ ಜೈಲು ಸಿಬ್ಬಂದಿಗೆ ಮನವಿ ಮಾದ್ದಾರೆ. ಸಂಜೆ 4.30 ರಿಂದ 5.30ರವರೆಗೆ ಸಂದರ್ಶಕರ ಭೇಟಿಯ ಸಮಯವಿರುತ್ತದೆ. ನಿಯಮಗಳ ಪ್ರಕಾರ ಒಬ್ಬ ಕೈದಿ ಆರ್ಧ ಗಂಟೆ ಸಂಬಂಧಿಕರ ಜೊತೆಗೆ ಮಾತನಾಡಬಹುದು. ಹೀಗಾಗಿ ಹೈಸೆಕ್ಯೂರಿಟಿ ಜೈಲಿನಿಂದ ಸಂದರ್ಶಕರ ಕೊಠಡಿಗೆ ದರ್ಶನ್ ಬರಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next