Advertisement

Udupi ಸಂಕಷ್ಟ ಪರಿಹರಿಸುವುದಾಗಿ ನಂಬಿಸಿ ಮಹಿಳೆಗೆ ವಂಚನೆ

10:55 PM Oct 10, 2023 | Team Udayavani |

ಉಡುಪಿ: ಯಕ್ಷಿಣಿ ವಿದ್ಯೆಯ ಮೂಲಕ ಸಂಕಷ್ಟ ಪರಿಹಾರ ಮಾಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ ಘಟನೆ ನಡೆದಿದೆ.

Advertisement

ಬೆಂಗಳೂರು ಮೂಲದ ಪ್ರತಿಭಾ ಅವರಿಗೆ ಆರೋಪಿ ಪ್ರವೀಣ್‌ ತಂತ್ರಿ ಎಂಬಾತ 5-6 ತಿಂಗಳ ಹಿಂದೆ ಪರಿಚಯವಾಗಿದ್ದ. ಆಕೆಯ ಸಮಸ್ಯೆಗಳನ್ನು ಯಕ್ಷಿಣಿ ವಿದ್ಯೆಯ ಮುಖಾಂತರ ಕಷ್ಟ ಪರಿಹಾರ ಮಾಡುವುದಾಗಿ ನಂಬಿಸಿ ಹಂತ-ಹಂತವಾಗಿ ಒಂದು ಲಕ್ಷ ರೂ. ಪಡೆದುಕೊಂಡಿದ್ದಾನೆ. ಬಳಿಕ ಪ್ರತಿಭಾ ಮತ್ತು ಆಕೆಯ ಮಕ್ಕಳು ಹಾಕಿಕೊಳ್ಳುವ ಆಭರಣಗಳನ್ನು ಪೂಜೆ ಮಾಡಿಸಬೇಕೆಂದು ಹೇಳಿ ಮೇ 24ರಂದು ಕಾಸರಗೋಡು ಜಿಲ್ಲೆಯ ದೇವಸ್ಥಾನವೆಂದರಲ್ಲಿ ಸುಮಾರು 20 ಲ.ರೂ. ಮೌಲ್ಯದ ಒಟ್ಟು 340 ಗ್ರಾಂ ತೂಕದ ಚಿನ್ನಾಭರಣಗಳನ್ನು ಮಹಿಳೆಯಿಂದ ಪಡೆದು ಅವುಗಳನ್ನು ವಾಪಸು ಕೊಡದೆ ನಂಬಿಕೆದ್ರೋಹ ಎಸಗಿ ಮೋಸ ಮಾಡಿದ್ದಾನೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next