Advertisement

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ಸಿಡಿಲು ಬಡಿದು ದನಗಾಯಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಜರುಗಿದೆ. ಸಿಡಿಲಿಗೆ ಬಲಿಯಾದ ದನಗಾಯಿ ಮಹಿಳೆಯನ್ನು ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದ ಲಕ್ಷ್ಮೀಬಾಯಿ ಹನುಮಂತ ತಳವಾರ (50) ಎಂದು ಗುರುತಿಸಲಾಗಿದೆ.

Advertisement

ದೇವರಹಿಪ್ಪರಗಿ ತಾಲೂಕಿನಲ್ಲಿ ಮಧ್ಯಾಹ್ನ ಗುಡುಗು ಸಹಿತ ಮಳೆ ಆರಂಭಗೊಂಡಿದ್ದು, ಈ ಸಂದರ್ಭದಲ್ಲಿ ದನಗಳನ್ನು ಮೇಯಿಸುತ್ತಿದ್ದ ಪಡಗಾನೂರ ಗ್ರಾಮದ ದನಗಾಯಿ ಮಹಿಳೆ ಲಕ್ಷ್ಮೀಬಾಯಿ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ ಐ ರವಿ ಯಡೆಣ್ಣನವರ  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next