Advertisement

Madikeri ಮರದ ಕೊಂಬೆ ಬಿದ್ದು ಮಹಿಳೆ ಸಾವು

12:32 AM Dec 21, 2023 | Team Udayavani |

ಮಡಿಕೇರಿ: ಮರದ ಕೊಂಬೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ತೋಟವೊಂದರಲ್ಲಿ ಸಂಭವಿಸಿದೆ.

Advertisement

ತೋಟದ ಲೈನ್‌ ಮನೆಯಲ್ಲಿ ವಾಸವಾಗಿರುವ ಕಾರ್ಮಿಕ ಬಪ್ಪಯ್ಯ ಅವರ ಪತ್ನಿ ಲಕ್ಷ್ಮೀ (48) ಮೃತಪಟ್ಟವರು.

ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಮರದ ಕೊಂಬೆ ತಲೆಯ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಲಕ್ಷ್ಮೀ ಅವರನ್ನು ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಲಕ್ಷ್ಮೀ ಮೃತಪಟ್ಟಿದ್ದರು.

ಮೃತರು ಪತಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next