Advertisement

ವಿದ್ಯುತ್ ತಗುಲಿ ಮಹಿಳೆ ಸಾವು: ಬೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ

10:01 PM Oct 10, 2022 | Team Udayavani |

ಪಾವಗಡ: ತಾಲ್ಲೂಕಿನ ಕೆಂಚಮ್ಮನಹಳ್ಳಿಯಲ್ಲಿ ವಿದ್ಯುತ್ ತಗುಲಿ ಮಹಿಳೆಯೋರ್ವರು ಸೋಮವಾರ ಮೃತಪಟ್ಟಿದ್ದಾರೆ. ಮೃತರ ಸಂಬಂಧಿಕರು ಮೃತ ದೇಹವನ್ನು ಬೆಸ್ಕಾಂ ಕಚೇರಿ ಮುಂಭಾಗ ಇಟ್ಟು ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

ಮಂಗಳಗೌರಮ್ಮ(25) ಮೃತ ದುರ್ದೈವಿ. ಗ್ರಾಮದ ಬಳಿಯ ಜಮೀನಿನಲ್ಲಿ ವಿದ್ಯುತ್ ತಂತಿ ತಗುಲುವ ರೀತಿ ಇದೆ. ಶೀಘ್ರ ದುರಸ್ಥಿ ಮಾಡಿ ಎಂದು ಬೆಸ್ಕಾಂ ಅಧಿಕಾರಿಗಳಿಗೆ ಹಲ ಬಾರಿ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿ ಇದೀಗ ಅಮೂಲ್ಯ ಜೀವ ಹೋಗಲು ಕಾರಣರಾಗಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಸ್ಥಳಕ್ಕೆ ಪಾವಗಡ ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಬೇಟಿ ನೀಡಿ ಮಾತುಕತೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next