Advertisement

Lingsugur; ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಕೊಲೆ

11:42 AM Mar 11, 2024 | Team Udayavani |

ಲಿಂಗಸೂಗುರು: ಕಲ್ಲಿನಿಂದ ಜಜ್ಜಿ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಪಟ್ಟಣದ ಬಸ್ ನಿಲ್ದಾಣ ಹಿಂದಿನ ಎನ್‌.ಜಿ.ಒ. ಬಡಾವಣೆಯಲ್ಲಿ ರವಿವಾರ ರಾತ್ರಿ ನಡೆದಿದೆ.

Advertisement

ಯರಡೋಣ ನಿವಾಸಿ ವಿಜಯಲಕ್ಷ್ಮೀ ಸೋಮಪ್ಪ (32) ಕೊಲೆಯಾದ ಮಹಿಳೆ.

ಅಂಕುಶದೊಡ್ಡಿ ಗ್ರಾಮದ ವ್ಯಕ್ತಿಗೆ ವಿಜಯಲಕ್ಷ್ಮೀಯನ್ನು ವಿವಾಹ ಮಾಡಿಕೊಡಲಾಗಿತ್ತು. ಎರಡು ವರ್ಷಗಳ ಹಿಂದೆ ಪತಿ ಮೃತಪಟ್ಟಿದ್ದ ಕಾರಣ ತವರು ಮನೆ ಯರಡೋಣ ಗ್ರಾಮದಲ್ಲಿ ಮಹಿಳೆ ವಾಸಿಸುತ್ತಿದ್ದಳು. ಈಗ ಮಹಿಳೆ ಕೊಲೆಗೀಡಾಗಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಲಿಂಗಸೂಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next