Advertisement

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ, ಗುಂಡಿನ ದಾಳಿಗೆ ಮಹಿಳೆ ಬಲಿ; ಕಲ್ಲು ತೂರಾಟ

09:38 AM Jun 06, 2019 | Nagendra Trasi |

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಹಲವು ಜಿಲ್ಲೆಗಳಲ್ಲಿ ಬುಧವಾರ ಬೆಳಗ್ಗೆ ಈದ್ ಪ್ರಾರ್ಥನೆ ಮುಗಿದ ಬಳಿಕ ಯುವಕರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಶ್ರೀನಗರ್, ಪುಲ್ವಾಮಾ, ಸೋಪೋರೆ, ಬಾರಾಮುಲ್ಲಾ ಸೇರಿದಂತೆ ಕಣಿವೆ ಪ್ರದೇಶದಲ್ಲಿ ಪ್ರತ್ಯೇಕತಾವಾದಿಗಳ ಗುಂಪು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿವೆ ಎಂದು ವರದಿ ತಿಳಿಸಿದೆ.

Advertisement

ಸೋಪೊರೆ ಸಮೀಪದ ಜಾಮೀಯ ಮಸೀದಿ ಸಮೀಪ ಘರ್ಷಣೆ ನಡೆದಿದ್ದು, ಭಾರತ ವಿರೋಧಿ ಘೋಷಣೆ ಕೂಗಿರುವುದಾಗಿ ವರದಿ ವಿವರಿಸಿದೆ. ಏತನ್ಮಧ್ಯೆ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ.

ಘರ್ಷಣೆಯಲ್ಲಿ ಮೊಹಮ್ಮದ್ ಸುಲ್ತಾನ್ ಎಂಬಾತ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಉಗ್ರರ ಗುಂಡಿಗೆ ಬಲಿಯಾದ ಮಹಿಳೆ ನಿಗೀನಾ ಬಾನು ಎಂದು ಗುರುತಿಸಲಾಗಿದೆ. ಸುಲ್ತಾನ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next