Advertisement

Raichur: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು

02:40 PM Aug 21, 2024 | Team Udayavani |

ರಾಯಚೂರು: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಯರಗೇರಾ ಟೋಲ್ ಗೇಟ್ ಬಳಿ ಸಂಭವಿಸಿದೆ.

Advertisement

ತಾಲೂಕಿನ ಹಂಚಿನಾಳ ಗ್ರಾಮದ ನಿವಾಸಿ ಅನ್ನಪೂರ್ಣ (34) ಮೃತಪಟ್ಟ ಮಹಿಳೆ.

ವಿಜಯಪುರದಿಂದ ಹಂಚಿನಾಳ ಗ್ರಾಮಕ್ಕೆ ಬರುತ್ತಿದ್ದ ಸಂದರ್ಭ ಆ.20ರ ಬುಧವಾರ ಮಧ್ಯರಾತ್ರಿ ಈ ಅಪಘಾತ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಮನೆ ಇನ್ನು ಕೇವಲ 1 ಕಿ.ಮೀ. ದೂರ ಇರುವಾಗಲೇ ದುರಂತ ಸಂಭವಿಸಿದೆ.

ಕಾರು ಚಲಾಯಿಸುತ್ತಿದ್ದ, ಗುಂಜಳ್ಳಿ ಗ್ರಾಪಂ ಅಧ್ಯಕ್ಷ ನವೀನ್ ಗೌಡ ಅವರಿಗೆ ಗಾಯಗಳಾಗಿವೆ. ಗಾಯಗೊಂಡವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಡಪನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next