Advertisement

ತೀರ್ಥಹಳ್ಳಿ: ಮಳೆಗೆ ಹಳ್ಳದಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವು

12:43 PM Jul 18, 2022 | Team Udayavani |

ತೀರ್ಥಹಳ್ಳಿ: ಹಳ್ಳದಲ್ಲಿ ಕೊಚ್ಚಿ ಹೋಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಕ್ಲಪುರ ಗ್ರಾಮದಲ್ಲಿ ನಡೆದಿದೆ.

Advertisement

ಭವಾನಿಯಮ್ಮ (52 ) ಮೃತ ಮಹಿಳೆ.

ಭವಾನಿಯಮ್ಮ ಅವರು ಎಂದಿನಂತೆ ಭಾನುವಾರ ಬೆಳಿಗ್ಗೆ ತಮ್ಮ ತೋಟಕ್ಕೆ  ಹೋಗಿದ್ದಾರೆ ಸಂಜೆಯವರೆಗೂ ಮನೆಗೆ ಬರದಿದ್ದಾಗ ಕುಟುಂಬದವರು ಇವರನ್ನು ಹುಡುಕಲು ಪ್ರಾರಂಭಿಸಿದ್ದು, ಎಷ್ಟೇ ಹುಡುಕಿದರೂ ಇವರ ಸುಳಿವು ಸಿಗಲಿಲ್ಲ. ತಡರಾತ್ರಿಯವರೆಗೂ ಹುಡುಕಿದಾಗ ರಾತ್ರಿ ಹನ್ನೊಂದರ ಸಮಯಕ್ಕೆ ಹಳ್ಳದಲ್ಲಿ ಇವರ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಆದ ಪರಿಸ್ಥಿತಿಯೇ ಸಿದ್ದರಾಮಯ್ಯಗೆ ಆಗುತ್ತದೆ: ಈಶ್ವರಪ್ಪ

ವಿಷಯ ತಿಳಿಯುತ್ತಿದ್ದಂತೆ  ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ತೀರ್ಥಹಳ್ಳಿ ಪೊಲೀಸರು ಗ್ರಾಮಸ್ಥರು ಘಟನಾ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು  ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದೆ.

Advertisement

ಇವರು ಶಂಕರ ನಾರಾಯಣ ಭಟ್ ಇವರ ಪತ್ನಿ ಯಾಗಿದ್ದು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next