Advertisement

ಎಳೆನೀರು ಮಾರುತ್ತಿದ್ದ ಮಹಿಳೆಯ ಮಾಂಗಲ್ಯ ಸರ ದೋಚಿ ಪರಾರಿ

04:52 PM Apr 01, 2022 | Team Udayavani |

ಗಂಗಾವತಿ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿಗೆ ಆಗಮಿಸುವ ಪ್ರವಾಸಿಗರಿಗೆ ಎಳೆನೀರು, ತೆಂಗಿನಕಾಯಿ ಮಾರಾಟ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳರು ದೋಚಿ ಪರಾರಿಯಾದ ಘಟನೆ ಶುಕ್ರವಾರ ನಡೆದಿದೆ.

Advertisement

ಹನುಮನಹಳ್ಳಿ ಗ್ರಾಮದ ಖಾಜಾಬಿ ಹತ್ತಿರ ಬೈಕ್ ನಲ್ಲಿಆಗಮಿಸಿದ ಮೂವರು ತೆಂಗಿನ ಕಾಯಿ ಖರೀದಿಸುವ ನೆಪದಲ್ಲಿ ಮಹಿಳೆಯ ಕತ್ತಿನಲ್ಲಿದ್ದ 2ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಇದನ್ನೂ ಓದಿ:ವೈರಲ್ ಆಯ್ತು ಗೌತಮ್ ಗಂಭೀರ್- ಮಹೇಂದ್ರ ಸಿಂಗ್ ಧೋನಿ ಫೋಟೋ

ಶುಕ್ರವಾರ ಅಮವಾಸ್ಯೆಯಾಗಿದ್ದರಿಂದ ಹೆಚ್ಚಿನ ಭಕ್ತರು ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುತ್ತಿದ್ದು, ಶನಿವಾರ, ಮಂಗಳವಾರ ಅಮಾವಾಸ್ಯೆ ಮತ್ತು ಹುಣ್ಣಿಮೆಯಂದು ಹೆಚ್ಚು ಜನಸಂದಣಿ ಇರುತ್ತದೆ. ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದ್ದರೂ ವಿಶೇಷ ದಿನಗಳಲ್ಲಿ ಪೊಲೀಸ್ ಇಲಾಖೆ ಹೆಚ್ಚಿನ ಭದ್ರತೆ ನೀಡುವಲ್ಲಿ ವಿಫಲವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next