Advertisement

ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ

11:40 PM Mar 16, 2023 | Team Udayavani |

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಉಳ್ಳಾಲ ಕೋಟೆಪುರ ಬಸ್‌ ನಿಲ್ದಾಣದ ಸಮೀಪ ಸಂಜೆ ವೇಳೆ ಬೆಳಕಿಗೆ ಬಂದಿದ್ದು, ಆಕೆಯೊಂದಿಗೆ ವಾಸಿಸುತ್ತಿದ್ದ ದೆಹಲಿ ಮೂಲದ ನಯೀಮ್‌ ಎಂಬಾತ ಈ ಹತ್ಯೆಯನ್ನು ಮಾಡಿ ಪರಾರಿಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

Advertisement

ದೆಹಲಿ ಮೂಲದ 35-40 ರ ಹರೆಯದ ಮಹಿಳೆ ಹತ್ಯೆಯಾಗಿದ್ದು, ಎರಡು ದಿನಗಳ ಹಿಂದೆ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್‌ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್‌ ಎಂಬವರ ಬಾಡಿಗೆ ಮನೆಯನ್ನು ಪಡೆದುಕೊಂಡಿದ್ದರು. ಮನೆಗೆ ಬರುವಾಗ ಬಟ್ಟೆ ವ್ಯಾಪಾರ ನಡೆಸುವವರು ಎಂದು ತಿಳಿಸಿದ್ದು, ಇನ್ನೇನು ಬಟ್ಟೆಗಳು ಬರಬೇಕಿದೆ ಎಂದು ತಿಳಿಸಿ ಮನೆಯಲ್ಲಿದ್ದರು. ವ್ಯಕ್ತಿ ನೀಡಿರುವ ಆಧಾರ್‌ ಕಾರ್ಡ್‌ನ ಆಧಾರದಲ್ಲಿ ಮಹಿಳೆಯೊಂದಿಗೆ ಬಂದಿದ್ದ ವ್ಯಕ್ತಿ ನಯೀಮ್‌ (35) ಎಂದು ಗುರುತಿಸಲಾಗಿದ್ದು, ಈತ ತಲೆಮರೆಸಿಕೊಂಡಿ ಪೊಲೀಸರು ಶೋಧ ಕಾರ್ಯದಲ್ಲಿ ತೊಡಗಿಸಿದ್ದಾರೆ. ಎರಡು ದಿನಗಳಿಂದ ವಾಸಿಸುತ್ತಿದ್ದ ಇವರ ಬಾಡಿಗೆ ಮನೆಯ ಬಳಿ ಇರುವ ಮನೆಯೊಂದರ ಯುವಕ ಇಡೀ ದಿನ ಯಾರೂ ಈ ಮನೆಯಿಂದ ಹೊರಗಡೆ ಬಾರದೆ ಇದ್ದಾಗ,ಮನೆ ಬಳಿ ತೆರಳಿ ಪರಿಶೀಲಿಸಿದಾಗ ಶೌಚಾಲಯದೊಳಕ್ಕೆ ಮಹಿಳೆ ಮೃತದೇಹ ಚೂರಿಯಿಂದ ಇರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆರಳಚ್ಚು ತಜ್ಞರು, ಫಾರೆನ್ಸಿಕ್‌ ವಿಭಾಗ, ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next