Advertisement

ಸಿದ್ದರಾಮಯ್ಯ ನೀಡಿದ 2 ಲಕ್ಷ ರೂ. ಪರಿಹಾರ ಧನವನ್ನೇ ಎಸೆದ ಮಹಿಳೆ!

01:45 PM Jul 15, 2022 | Team Udayavani |

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ 2 ಲಕ್ಷ ರೂ ಪರಿಹಾರ ಧನವನ್ನು ಮಹಿಳೆಯೊಬ್ಬರು ಎಸೆದ ಘಟನೆ ಶುಕ್ರವಾರ ನಡೆದಿದೆ.

Advertisement

ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದ ಕೆರೂರ ಗುಂಪು ಘರ್ಷಣೆ ಗಾಯಾಳುಗಳ ಭೇಟಿಗೆ ಬಾಗಲಕೋಟೆಗೆ ಆಗಮಿಸಿದ ವೇಳೆ ಘಟನೆ ನಡೆದಿದ್ದು, ಗಾಯಾಳುಗಳ ಸಂಬಂಧಿಗಳು ಆಕ್ರೋಶ ಹೊರ ಹಾಕಿದ್ದಾರೆ. ಗಾಯಾಳುಗಳಿಗೆ ನೀಡಿದ ಹಣವನ್ನೇ ಮರಳಿ ಸಿದ್ದರಾಮಯ್ಯಗೆ ನೀಡಲು ಮುಂದಾಗಿದ್ದಾರೆ. ನಮಗೆ ನ್ಯಾಯ ಬೇಕು, ಹಣ ಬೇಡ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ವೇಳೆ ವಾಹನದಲ್ಲಿ ಸಿದ್ದರಾಮಯ್ಯ ಅವರು ಮರಳುತ್ತಲೇ ಹಣ ಹಿಡಿದು ವಾಹನದ ಹಿಂದೆ ಹೋದ ಮಹಿಳೆ ಹಣದ ಕಟ್ಟನ್ನು ಪೊಲೀಸ್ ಬೆಂಗಾವಲು ವಾಹನಕ್ಕೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಆಶೀರ್ವಾದ ಆಸ್ಪತ್ರೆಗೆ ಸಿದ್ದರಾಮಯ್ಯ ಭೇಟಿ ನೀಡಿ ಘರ್ಷಣೆಯಲ್ಲಿ ಗಾಯಗೊಂಡ ಹನೀಫ್, ರಾಜೇಸಾಬ್, ರಫೀಕ್, ದಾವಲ್ ಮಲೀಕ್ ಅವರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಘರ್ಷಣೆಯಲ್ಲಿ ಗಾಯಗೊಂಡಿದ್ದ ಇನ್ನೊಂದು ಗುಂಪು ಸಿದ್ದರಾಮಯ್ಯ ಭೇಟಿಗೆ ನಕಾರ ವ್ಯಕ್ತಪಡಿಸಿದೆ ಎಂದು ತಿಳಿದು ಬಂದಿದೆ.

Advertisement

”ನಾನು ಮಾನವೀಯತೆಯಿಂದ ಹಣ ನೀಡಿದ್ದೇನೆ. ಆ ಮಹಿಳೆಯನ್ನು ಯಾರೋ ಎತ್ತಿ ಕಟ್ಟಿದ್ದಾರೆ. ಹಾಗಾದರೆ ಮೃತಪಟ್ಟವರು ಎದ್ದು ಬರುತ್ತಾರೋ?” ಎಂದು ಸಿದ್ದರಾಮಯ್ಯ ಘಟನೆಯ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ಆಗಮಿಸಿದ ಹಿನ್ನೆಲೆಯಲ್ಲಿ ಡಿಸಿ ಸುನೀಲ್ ಕುಮಾರ್, ಎಸ್ಪಿ ಜಯಪ್ರಕಾಶ್ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next