Advertisement

ಮೂವರು ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ

12:15 PM Aug 15, 2019 | Team Udayavani |

ಧಾರವಾಡ: ತನ್ನ ಮೂವರು ಮಕ್ಕಳೊಂದಿಗೆ ತಾಯಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ತನ್ನ ಮಕ್ಕಳೊಂದಿಗೆ ಕೆಲಗೇರಿ ಕೆರೆಗೆ ಹಾರಿದ ಮಹಿಳೆಯನ್ನು ರತ್ನವ್ವ ವೇದಾರ ಎಂದು ಗುರುತಿಸಲಾಗಿದೆ.

Advertisement

ಘಟನೆ ನಡೆದ ತಕ್ಷಣವೇ ಸ್ಥಳೀಯರು ತಾಯಿ ಮತ್ತು ಇಬ್ಬರು ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇನ್ನೊಂದು ಮಗು ಮಾತ್ರ ನೀರಿನಲ್ಲಿ ಕೊಚ್ಚಿಹೋಗಿದ್ದು ಹುಡುಕಾಟ ಮುಂದುವರೆದಿದೆ.


ಮೂಲತಃ ಕೆಲಗೇರಿಯವರಾಗಿರುವ ರತ್ನವ್ವರನ್ನು ಜಮಖಂಡಿಯ ವ್ಯಕ್ತಿಯೊಬ್ಬರಿಗೆ ವಿವಾಹ ಮಾಡಿಕೊಡಲಾಗಿತ್ತು. ಪಂಚಮಿ ಹಬ್ಬಕ್ಕೆಂದು ರತ್ನವ್ವ ತನ್ನ ಮೂವರು ಮಕ್ಕಳೊಂದಿಗೆ ತವರು ಮನೆಗೆ ಬಂದಿದ್ದರು. ಇಂದು ಏಕಾಏಕಿ ಮಕ್ಕಳೊಂದಿಗೆ ತಾನೂ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದು ಮಾತ್ರ ಯಾಕೆ ಎಂಬ ವಿಚಾರ ಇದೀಗ ಸ್ಥಳೀಯರ ಅಚ್ಚರಿಗೆ ಕಾರಣವಾಗಿದೆ.

ಘಟನೆಯಲ್ಲಿ ರಕ್ಷಣೆಗೊಳಗಾದ ತಾಯಿ ಮತ್ತು ಇಬ್ಬರು ಮಕ್ಕಳನ್ನು ಇದೀಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next