Advertisement

ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ವೃದ್ದೆ ಶವವಾಗಿ ಪತ್ತೆ

10:45 AM Jul 22, 2022 | Team Udayavani |

ಸಕಲೇಶಪುರ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ವೃದ್ದೆಯೊಬ್ಬರು ಹೇಮಾವತಿ ನದಿಯಲ್ಲಿ ಶವವಾಗಿ ಶುಕ್ರವಾರ ಪತ್ತೆಯಾಗಿದ್ದಾರೆ.

Advertisement

ಬಾಚಿಹಳ್ಳಿ ಗ್ರಾಮದ ನಿವಾಸಿ ಸುಶೀಲಮ್ಮ(58) ಮೃತ ದುರ್ದೈವಿ.

ಸುಶೀಲಮ್ಮ ಮನೆಯಿಂದ ಹೊರ ಹೋದವರು ವಾಪಸ್ ಬಂದಿರಲಿಲ್ಲ. ಈ ಬಗ್ಗೆ ಯಸಳೂರು ಪೊಲೀಸ್ ಠಾಣೆಯಲ್ಲಿ  ಕಾಣೆಯಾಗಿದ್ದಾರೆ ಎಂದು  ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: VIDEO: ಸೇತುವೆ ಮೇಲೆ ಸಾಗುತ್ತಿದ್ದ ರೈಲಿನಲ್ಲಿ ಬೆಂಕಿ; ಕಿಟಕಿ ಮೂಲಕ ಜಿಗಿದ ಪ್ರಯಾಣಿಕರು

ಶುಕ್ರವಾರ ಮುಂಜಾನೆ  ಸಕಲೇಶಪುರ ಪಟ್ಟಣದ ಹೇಮಾವತಿ ನದಿ ದಂಡೆಯಲ್ಲಿ ಸುಶೀಲಮ್ಮ ಅವರ ಮೃತದೇಹ ದೊರಕಿದೆ. ಆರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ  ನದಿಗೆ ಹಾರಿ ಪ್ರಾಣ ಕಳೆದುಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.

Advertisement

ಘಟನೆ ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next