Advertisement

ತೇಜಸ್ವಿ ಸೂರ್ಯಗೆ ಮಹಿಳಾ ಆಯೋಗ ನೋಟಿಸ್‌

07:25 PM Apr 02, 2019 | Lakshmi GovindaRaju |

ತೇಜಸ್ವಿ ಸೂರ್ಯಗೆ ಮಹಿಳಾ ಆಯೋಗ ನೋಟಿಸ್‌ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಮಹಿಳಾ ಘಟಕ ದೂರು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಸೋಮವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ತೇಜಸ್ವಿ ಸೂರ್ಯ ಅವರಿಗೆ ಖುದ್ದು ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದಾರೆ.

Advertisement

ಏ.3 (ಬುಧವಾರ) ಅಪರಾಹ್ನ 12 ಗಂಟೆ ಸುಮಾರಿಗೆ ರಾಜ್ಯ ಮಹಿಳಾ ಆಯೋಗದ ಎದುರು ಖುದ್ದು ಹಾಜರಾಗಿ ತಮ್ಮ ಹೇಳಿಕೆ ದಾಖಲಿಸುವಂತೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಹೇಳಿದರು.

ದೆಹಲಿ ಮೂಲದ ಮಹಿಳೆಯೊಬ್ಬರು ತೇಜಸ್ವಿ ಸೂರ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ, ಮಹಿಳಾ ಮೀಸಲಾತಿ ಬಗ್ಗೆಯೂ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಡಾ ಪುಷ್ಪಾ ಅಮರ್‌ನಾಥ್‌ ದೂರು ನೀಡಿದ್ದರು. ಈ ಸಂಬಂಧ ನೋಟಿಸ್‌ ಜಾರಿ ಮಾಡಿದ್ದು, ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next