Advertisement

ಮಧುಗಿರಿ: ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

01:56 PM Mar 10, 2022 | Team Udayavani |

ಮಧುಗಿರಿ: ಹೊಟ್ಟೆನೋವು ತಾಳಲಾರದೆ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೊಡ್ಡೇರಿ ಹೋಬಳಿ ಲಕ್ಷೀಪುರ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

Advertisement

ಮಂಜುಳಾ ಮೃತ ಮಹಿಳೆ ಎಂದು ತಿಳಿದು ಬಂದಿದೆ. ಸುಮಾರು ತಿಂಗಳಿಂದ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಇದರಿಂದ ಬೇಸತ್ತ ಅವರು ನೋವು ಸಹಿಸಲಾರದೆ, ಗ್ರಾಮದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ತಹಶೀಲ್ದಾರ್ , ಬಡವನಹಳ್ಳಿ ಸಿಪಿಐ  ಹನುಮಂತರಾಯಪ್ಪ  ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ಸಂದರ್ಭದಲ್ಲಿ  ಗ್ರಾ.ಪಂ.ಸದಸ್ಯರಾದ ಮಂಜುನಾಥ ಕುಮಾರ್ ಮುದ್ದರಾಜು ವಕೀಲರಾದ ಶಿವಣ್ಣ,   ರಂಗಸ್ವಾಮಿ  ಗಂಗಾಧರ ಹಾಗೂ ಗ್ರಾಮಸ್ಥರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next