Advertisement

ಕಾರ್ಕಳ : ಚೆಕ್‍ ಪೋಸ್ಟಿನಲ್ಲಿ ವಿಳಂಬ; ಎದೆನೋವಿನಿಂದ ಬಳಲುತ್ತಿದ್ದ ಮಹಿಳೆ ಸಾವು

02:34 PM May 10, 2021 | Team Udayavani |

ಕಾರ್ಕಳ : ಚೆಕ್ ಪೋಸ್ಟಿನಲ್ಲಿ ವಿಳಂಬವಾದ ಹಿನ್ನೆಲೆ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ತಲುಪಲಾಗದೆ ಮಹಿಳೆಯೋರ್ವಳು ಸಾವನ್ನಪ್ಪಿರುವ ಘಟನೆ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ನಲ್ಲೂರು ನಿವಾಸಿ ಮಂಜುಳಾ (33) ಮೃತ ದುರ್ದೈವಿ.

Advertisement

ಮಂಜುಳಾ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದರಿಂದ ಕಾರಿನಲ್ಲಿ ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಬಜಗೋಳಿ ಚೆಕ್ ಪೋಸ್ಟ್  ವಾಹನ ಅಡ್ಡಗಟ್ಟಿದ ಸಿಬ್ಬಂದಿ, ಖಾಸಗಿ ವಾಹನಕ್ಕೆ ಅನುಮತಿ ಇಲ್ಲ. ಆ್ಯಂಬುಲೆನ್ಸ್ ಗೆ ಕರೆ ಮಾಡಿ, ಅದರಲ್ಲಿ ತೆಗೆದುಕೊಂಡು ಹೋಗಿ ಎಂದು ಸೂಚಿಸಿದ್ದಾರೆ. ಎಷ್ಟೇ ಮನವಿ ಮಾಡಿಕೊಂಡರು ಆಸ್ಪತ್ರೆಗೆ ತೆರಳಲು ಅವಕಾಶ ಮಾಡಿಕೊಟ್ಟಿಲ್ಲ. ಕೊನೆಗೆ ಅಲ್ಲಿಂದು ಹಿಂದುರಿಗಿ ಬಂದು, ಬೇರೆ ಮಾರ್ಗದ (ಅಡ್ಡ ರಸ್ತೆ) ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಇತ್ತ ಆಸ್ಪತ್ರೆಯಲ್ಲಿಯೂ ವಿಳಂಬವಾಗಿದ್ದರಿಂದ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿದ್ದಾಳೆ ಎಂದು ಮೃತಳ ಸಂಬಂಧಿಕರು ಹೇಳಿದ್ದಾರೆ.

ಅಕ್ಕನನ್ನು ಕಳೆದುಕೊಂಡ ಸಹೋದರಿಯ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಮಂಜುಳಾ ಸಾವಿಗೆ ಚೆಕ್ ಪೋಸ್ಟಿನಲ್ಲಿ ವಿಳಂಬವಾಗಿರುವುದೇ ಕಾರಣ ಎಂದು ಮೃತಳ ಸಂಬಂಧಿಕರು ಆರೋಪಿಸಿದ್ದಾರೆ.

ಇನ್ನು ಘಟನೆ ಕುರಿತು ಉದಯವಾಣಿಗೆ ಪ್ರತಿಕ್ರಿಯಿಸಿರುವ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಕೆ.ಎಸ್.ರಾವ್, ರೋಗಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ವಿಳಂಬವಾಗಿಲ್ಲ. ಪ್ರಾಥಮಿಕ ರ್ಯಾಪಿಡ್ ಪರೀಕ್ಷೆ ಮಾಡಲಾಗಿತ್ತು. ಅದರಲ್ಲಿ ನೆಗೆಟಿವ್ ಬಂದಿತ್ತು. ಆರ್ ಟಿಪಿಸಿ ಆರ್ ಪರೀಕ್ಷೆಯನ್ನು ನಡೆಸಲಾಗಿತ್ತು. ಕೋವಿಡ್ ನಿಯಮ ಅನುಸರಿಸಿಯೇ ಚಿಕಿತ್ಸೆ ನಡೆಸಬೇಕು. ಅದಲ್ಲದೆ ಅವರು ಖಾಸಗಿ ಸಿಟಿ ಆಸ್ಪತ್ರೆಗೆ ತೆರಳಿ ಅನಂತರ ಇಲ್ಲಿಗೆ ಬಂದಿದ್ದಾರೆ. ಚೆಕ್ ಪೋಸ್ಟ್ ನಲ್ಲಿ ವಿಳಂಬ ಎನ್ನುವುದು ಅವರ ಆರೋಪವಾಗಿತ್ತು.ನಮ್ಮಲ್ಲಿ ಚಿಕಿತ್ಸೆ ವಿಳಂಬ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next