Advertisement

ಕಟ್ಟಡದಿಂದ ಹಾರಿ ಮಹಿಳಾ ಟೆಕ್ಕಿ ಆತ್ಮಹತ್ಯೆ: ವಾಮಾಚಾರ ಭೀತಿ?

02:32 PM Jan 19, 2017 | Team Udayavani |

ಬೆಂಗಳೂರು: ನಗರದ ವೈಟ್‌ಫೀಲ್ಡ್‌ನ ಪ್ರತಿಷ್ಠಿತ ಕಂಪೆನಿಯೊಂದರ ಮಹಿಳಾ ಟೆಕ್ಕಿಯೊಬ್ಬರು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. 

Advertisement

ಹರ್ಮಾನ್‌ ಕಂಪೆನಿಯ ಟೆಕ್ಕಿ ಶೋಭಾ ಲಕ್ಷ್ಮಿ ನಾರಾಯಣ್‌ (30) ಎನ್ನುವವರು ಆಫೀಸ್‌ಗೆ ತೆರಳಿ ಕೆಲವೇ ನಿಮಿಷಗಳಲ್ಲಿ ಕಟ್ಟಡದ ನಾಲ್ಕನೇ ಮಹಡಿಗೆ ತೆರಳಿದ್ದು ಅಲ್ಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. 

ತನ್ನ ವಿರುದ್ಧ ವಾಮಾಚಾರ ಮಾಡಿದ್ದರಿಂದ ಬೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ವೈಟ್‌ ಫೀಲ್ಡ್‌ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next