Advertisement

Controversy; ಲಿಪ್ ಸ್ಟಿಕ್ ಹಚ್ಚಿರುವರು ಮುಂದೆ ಬರುತ್ತಾರೆ..!; ಆರ್ ಜೆಡಿ ನಾಯಕ ಸಿದ್ದಿಕಿ

04:17 PM Sep 30, 2023 | |

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಅಂಗೀಕರಿಸಲಾದ ಮಹಿಳಾ ಮೀಸಲಾತಿ ಮಸೂದೆಯ ಕುರಿತು ಪ್ರತಿಕ್ರಿಯೆ ನೀಡುವ ವೇಳೆ ಆರ್‌ಜೆಡಿ ಹಿರಿಯ ನಾಯಕ ಅಬ್ದುಲ್ ಬಾರಿ ಸಿದ್ದಿಕಿ ವಿವಾದಾತ್ಮಕ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

Advertisement

ಬಿಹಾರದ ಮುಜಾಫರ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದಿಕಿ, ‘ಮಸೂದೆಯ ಹೆಸರಿನಲ್ಲಿ ಲಿಪ್‌ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ. ಬದಲಾಗಿ ಹಿಂದುಳಿದ ಸಮುದಾಯದ ಮಹಿಳೆಯರಿಗೆ ಸರಕಾರ ಮೀಸಲಾತಿ ನೀಡಬೇಕು’ ಎಂದು ಹೇಳಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆ ಮುಗಿಯುವವರೆಗೆ ದೂರದರ್ಶನ ಮತ್ತು ಸಾಮಾಜಿಕ ಮಾಧ್ಯಮಗಳಿಂದ ದೂರವಿರುವಂತೆ ಆರ್‌ಜೆಡಿ ನಾಯಕ ತಮ್ಮ ಬೆಂಬಲಿಗರಿಗೆ ಸಲಹೆ ನೀಡಿದರು.

ಹೇಳಿಕೆ ಕುರಿತು ಇಂಡಿಯಾ ಮೈತ್ರಿಕೂಟದ ಸಂಸದೆಯರು ಸೇರಿ ಹಲವು ನಾಯಕಿಯರು ಆಕ್ರೋಶ ಹೊರ ಹಾಕಿದ್ದಾರೆ. ವಿರೋಧ ವ್ಯಕ್ತವಾಗುತ್ತಿದ್ದಂತೆ ಆರ್‌ಜೆಡಿ ನಾಯಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಇದು ಗ್ರಾಮೀಣ ಜನರಿಗೆ ಸುಲಭವಾಗಿ ಅರ್ಥಮಾಡಿಕೊಳ್ಳುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದು, ತಮ್ಮ ಹೇಳಿಕೆಯಿಂದ ಯಾರನ್ನೂ ನೋಯಿಸುವ ಉದ್ದೇಶವಿರಲ್ಲ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next