Advertisement

ಮಹಿಳಾ ಮಂಡಳಿ: ವಾರ್ಷಿಕ ಮಹಾಸಭೆ,ಪುಸ್ತಕ ವಿತರಣೆ

08:42 PM May 15, 2019 | Sriram |

ಕುರ್ನಾಡು: ಮುಡಿಪು ವಿಶ್ವಕರ್ಮ ಸಂಘ ಮತ್ತು ಸಿಂಧೂರ ಮಹಿಳಾ ಮಂಡಳಿ ಇದರ ವಾರ್ಷಿಕ ಮಹಾ ಸಭೆ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮವು ಸಂಘದ ಅಧ್ಯಕ್ಷ ಇರಾ ಯೋಗೀಶ್‌ ಆಚಾರ್ಯ ಮುಡಿಪು ಇವರ ಅಧ್ಯಕ್ಷತೆಯಲ್ಲಿ ಸಂಘದ ಕಟ್ಟಡದಲ್ಲಿ ಜರಗಿತು.

Advertisement

ಗೌರವಾರ್ಪಣೆ
ಮುಖ್ಯ ಅತಿಥಿಗಳಾಗಿ ವಿಶ್ವಕರ್ಮ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷ, ಮಂಗಳೂರು ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ .ಕೇಶವ ಆಚಾರ್ಯ ಮಂಗಳೂರು, ಸಂಘದ ಗೌರವ ಸಲಹೆಗಾರರಾದ ಕೆ.ಕೆ ಆಚಾರ್ಯ, ಬೈಕಾಡಿ ಜನಾರ್ದನ ಆಚಾರ್ಯ, ಎಸ್‌ .ವಿ. ಆಚಾರ್ಯ, ಯೋಗೀಶ್‌ ಆಚಾರ್ಯ, ಕಾನೂನು ಸಲಹೆಗಾರರಾದ ಪ್ರಭಾಕರ ಆಚಾರ್ಯ, ಸ್ಥಳದಾನಿಗಳಾದ ನೇತ್ರಾವತಿ ಪದ್ಮನಾಭ ಆಚಾರ್ಯ ಮುಡಿಪು ಇವರಿಗೆ ಗೌರವಾರ್ಪಣೆ ಮಾಡಲಾಯಿತು.

ಬಳಿಕ ಪ್ರಾಥವಿುಕ ಶಾಲಾ ಹಂತದಿಂದ ಕಾಲೇಜು ವರೆಗಿನ ಸುಮಾರು 127 ವಿದ್ಯಾರ್ಥಿಗಳಿಗೆ ಸಾರ್ವಜನಿಕವಾಗಿ ಉಚಿತ ಪುಸ್ತಕಗಳನ್ನು ವಿತರಿಸಲಾಯಿತು.

ಸಂಘದ ಗೌರವಾಧ್ಯಕ್ಷರಾದ ವಿಠಲ ಆಚಾರ್ಯ ಮಿತ್ತಕೊಡಿ, ಕಟ್ಟಡ ಸಮಿತಿಯ ಕಾರ್ಯಾ ಧ್ಯಕ್ಷರಾದ ಹರೀಶ್‌ ಆಚಾರ್ಯ ಹರೇಕಳ, ಸಿಂಧೂರ ಮಹಿಳಾ ಮಂಡಳಿ ಅಧ್ಯಕ್ಷೆ ಮಾಧವಿ ವಿಠಲ ಆಚಾರ್ಯ ಉಪಸ್ಥಿತರಿದ್ದರು.

2018-19 ಸಾಲಿನ ವರದಿಯನ್ನು ಕಾರ್ಯದರ್ಶಿ ಪ್ರವೀಣ್‌ ಆಚಾರ್ಯ ವಾಚಿಸಿದರು.
ಕೋಶಾಧಿಕಾರಿಗಳಾದ ದಾಮೋದರ ಆಚಾರ್ಯ,ಪ್ರಮೀಳ ಹರೀಶ್‌ ಆಚಾರ್ಯ, ಜಗದೀಶ್‌ ಆಚಾರ್ಯ,ಲೆಕ್ಕಪತ್ರ ಮಂಡಿಸಿ ಸಮಾಜ ಬಾಂಧವರ ಅನುಮೋದನೆ ಪಡೆಯಲಾಯಿತು.

Advertisement

ಅಧ್ಯಕ್ಷರಾದ ಇರಾ ಯೋಗೀಶ್‌ ಆಚಾರ್ಯ ಸ್ವಾಗತಿಸಿ, ನವೀನ್‌ ಆಚಾರ್ಯ ಮುಡಿಪು ವಂದಿಸಿದರು. ಜಗದೀಶ್‌ ಆಚಾರ್ಯ ಮುಡಿಪು ಕಾರ್ಯಕ್ರಮ ನಿರ್ವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next