Advertisement

ಮಹಿಳಾ ವಿಶ್ವಕಪ್‌ ಕ್ರಿಕೆಟ್‌- ರಾಜ್ಯದ ಆಟಗಾರ್ತಿಯರಿಗೆ ಪ್ರೋತ್ಸಾಹಧನ

06:55 AM Jul 30, 2017 | Team Udayavani |

ಉಡುಪಿ:  ಇಂಗ್ಲೆಂಡಿನಲ್ಲಿ ನಡೆದ ಐಸಿಸಿ ವನಿತಾ ವಿಶ್ವಕಪ್‌ನ ಫೈನಲ್‌ನಲ್ಲಿ ಪ್ರಬಲ ಹೋರಾಟ ನೀಡಿ ಆತಿಥೇಯ ಇಂಗ್ಲೆಂಡಿಗೆ ಶರಣಾಗಿ ರನ್ನರ್‌ ಅಪ್‌ ಸ್ಥಾನ ಪಡೆದು ಭಾರತದ ಕೀರ್ತಿ ತಂದ ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ಸಾಧನೆಗೆ ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

ವನಿತಾ ತಂಡದಲ್ಲಿದ್ದ ಕರ್ನಾಟಕದ ಆಟಗಾರ್ತಿಯರಾದ ವಿಜಯಪುರ ಜಿಲ್ಲೆಯ ರಾಜೇಶ್ವರಿ ಗಾಯಕ್ವಾಡ್‌ ಹಾಗೂ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ವೇದ ಕೃಷ್ಣಮೂರ್ತಿ ಅವರಿಗೆ ರಾಜ್ಯ ಸರಕಾರದ ವತಿಯಿಂದ ತಲಾ 25 ಲ.ರೂ.ನಂತೆ  ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next