Advertisement

ನಿಮ್ಮನ್ನು ಮಲಗ್ಲಿಕ್ಕೆ ಬಿಡ್ತೀವಾ!;ಬಳ್ಳಾರಿಯಲ್ಲಿ ಗುಡುಗಿದ ರಾಮುಲು 

12:45 PM May 20, 2018 | |

ಬಳ್ಳಾರಿ: ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಸರ್ಕಾರದ ವಿರುದ್ಧ  ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಕಿಡಿ ಕಾರಿದ್ದು , ‘ತಪ್ಪಿಸಿಕೊಂಡಿದ್ದೇವೆ ಎಂದು ತಿಳಿಯಬೇಡಿ , ಪ್ರಬಲ ವಿರೋಧ ಪಕ್ಷವಾಗಿ ನಿಮ್ಮನ್ನು ಮಲಗಲು ಬಿಡುವುದಿಲ್ಲ’ ಎಂದು ಗುಡುಗಿದ್ದಾರೆ. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು ‘ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ ಜೈಲು ಪಾಲಾಗುವ ಭೀತಿ ಎದುರಾಗಿತ್ತು. ಹೀಗಾಗಿ 78 ಸ್ಥಾನಗಳನ್ನು ಗೆದ್ದರೂ ಜೆಡಿಎಸ್‌ಗೆ ಬೆಂಬಲ ನೀಡಿ ಸರ್ಕಾರ ರಚನೆಗೆ ಮುಂದಾಗಿದೆ. ಸರ್ಕಾರದ ಅವಧಿಯಲ್ಲಿ ಮಾಡಿದ ಅಕ್ರಮಗಳನ್ನು  ಮುಚ್ಚಿ  ಹಾಕಲು ಮುಂದಾಗಿದೆ. ನಾವು ಬಿಡುವುದಿಲ್ಲ. ನಿಮ್ಮ ಅಕ್ರಮಗಳನ್ನು ಭ್ರಷ್ಟಾಚಾರಗಳನ್ನು ರಾಜ್ಯದ ಜನರ ಮುಂದೆ ಎಳೆ ಎಳೆಯಾಗಿ ಬಿಚ್ಚಿಡುವ ಕೆಲಸ ಮಾಡುತ್ತೇವೆ’ ಎಂದಿದ್ದಾರೆ. 

‘ಲೋಕಾಯುಕ್ತವನ್ನು ಮುಚ್ಚಿ ಹಾಕಿ ಎಸಿಬಿ ರಚನೆ ಮಾಡಿ ಭ್ರಷ್ಟಾಚಾರಿಗಳಿಗೆ ಪ್ರಾಮಾಣಿಕರು ಎಂದು ಕ್ಲೀನ್‌ ಚಿಟ್‌ ನೀಡುವ ಕೆಲಸ ಮಾಡಿದ್ದಾರೆ. ಯಾವೆಲ್ಲಾ ಅಕ್ರಮಗಳನ್ನು ಮಾಡಿದ್ದಾರೋ ಅವುಗಳನ್ನು ಬಯಲು ಮಾಡುತ್ತೇವೆ’ ಎಂದು ಗುಡುಗಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next