Advertisement

ಪ್ರತಿಭಟನೆಗೆ ಜಗ್ಗಲ್ಲ…ಪೌರತ್ವ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯೋ ಪ್ರಶ್ನೆಯೇ ಇಲ್ಲ: ಶಾ

09:54 AM Jan 04, 2020 | Team Udayavani |

ಜೋಧ್ ಪುರ್: ಪೌರತ್ವ ತಿದ್ದುಪಡಿ ಕಾಯ್ದೆ ಯಾವುದೇ ಅಲ್ಪಸಂಖ್ಯಾತರ ವಿರುದ್ಧವಾಗಿಲ್ಲ. ಅಲ್ಲದೇ ಯಾವುದೇ ಕಾರಣಕ್ಕೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಸಿಎಎ ಮುಸ್ಲಿಂ ವಿರೋಧಿ ಎಂಬ ಆರೋಪದ ಹಿನ್ನೆಲೆಯಲ್ಲಿ ದೇಶದ ಹಲವೆಡೆ ತೀವ್ರ ಪ್ರತಿಭಟನೆ ಮುಂದುವರಿದಿರುವ ನಡುವೆಯೇ ಜೋಧ್ ಪುರ್ ರಾಲಿಯಲ್ಲಿ ಮಾತನಾಡಿದ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಭಾರತೀಯ ಜನತಾ ಪಕ್ಷ ಅಲ್ಪಸಂಖ್ಯಾತರ ವಿರೋಧಿ ಎಂಬುದಾಗಿ ಸಾಂಪ್ರದಾಯಿಕವಾದ ಆರೋಪವಾಗಿದೆ. ಉಳಿದ ವಿರೋಧ ಪಕ್ಷಗಳು ಅಲ್ಪಸಂಖ್ಯಾತರ ಹೆಸರಲ್ಲಿ ಪ್ರತಿಭಟನೆ ನಡೆಸುವ ಮೂಲಕ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿವೆ ಎಂದು ಶಾ ತಿರುಗೇಟು ನೀಡಿದರು.

ವಿರೋಧ ಪಕ್ಷಗಳಾದ ಟಿಎಂಸಿ, ಸಮಾಜವಾದಿ ಪಕ್ಷ, ಬಹುಜನ್ ಸಮಾಜ್ ಪಕ್ಷ ಹಾಗೂ ಕಾಂಗ್ರೆಸ್ ಸಿಎಎಯನ್ನು ವಿರೋಧಿಸುತ್ತಿವೆ. ಇವರೆಲ್ಲಾ ಕಾಯ್ದೆ ವಿರುದ್ಧವಾಗಿ ಸುಳ್ಳುಸುದ್ದಿ ಹರಡುತ್ತಿದ್ದಾರೆ. ಇದರಿಂದಾಗಿ ಪ್ರತಿಭಟನೆ ನಡೆಯುವಂತಾಗಿದೆ ಎಂದು ಶಾ ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next