Advertisement

Congress ಪಕ್ಷಕ್ಕಾಗಿ ಕೆಲಸ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್‌

12:23 AM Jul 12, 2024 | Team Udayavani |

ಬೆಂಗಳೂರು: ಪಕ್ಷ ಎಲ್ಲರಿಗೂ ಅವಕಾಶ, ಅಧಿಕಾರ, ಸ್ಥಾನಮಾನಗಳನ್ನು ನೀಡುತ್ತದೆ. ಆದರೆ ಎಲ್ಲರೂ ಕೆಲಸ ಮಾಡಬೇಕು ಅಷ್ಟೇ ಎಂದು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕರೆ ನೀಡಿದರು.

Advertisement

ಗುರುವಾರ ವಿಧಾನಸೌಧದಲ್ಲಿ ವಿಧಾನಪರಿಷತ್‌ ಸದಸ್ಯ ಬಸನಗೌಡ ಬಾದರ್ಲಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಎಲ್ಲರೂ ಕುಳಿತು ಚರ್ಚಿಸಿ ಬಾದರ್ಲಿ ಅವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡಿ ಕಳುಹಿಸಿದ್ದೇವೆ. ಅವರು ಒಳ್ಳೆಯ ಕೆಲಸಗಳನ್ನು ಮಾಡಲಿ ಎಂಬುದಾಗಿ ಶುಭ ಹಾರೈಸುತ್ತೇನೆ ಎಂದರು.

ಪಕ್ಷ ಎಲ್ಲರಿಗೂ ಸ್ಥಾನಮಾನ ನೀಡಲು ಸಿದ್ಧವಿದೆ. ಆದರೆ ಪಕ್ಷಕ್ಕಾಗಿ ಕೆಲಸ ಮಾಡಬೇಕು. ಮುಂಬರುವ ಪಂಚಾಯತ್‌ ಚುನಾವಣೆಗಳು ಹಾಗೂ 2028ರ ಚುನಾವಣೆಗೆ ಈಗಿನಿಂದಲೇ ತಯಾರಾಗಿ. ತಳಮಟ್ಟದಿಂದ ಪಕ್ಷ ಕಟ್ಟಲು ಸ್ಥಳೀಯವಾಗಿ ಪ್ರತಿಯೊಬ್ಬರೂ ಕೆಲಸ ಮಾಡಿ ಎಂದು ನಿರ್ದೇಶನ ನೀಡಿದರು.

ಬಾದರ್ಲಿ ಬ್ಯಾನರ್‌ ಹಾಕಿದ ನಲಪಾಡ್‌
ಮೇಲೆ ಕೇಸ್‌: ಶಿವಕುಮಾರ್‌ ಎಚ್ಚರಿಕೆ
ಬೆಂಗಳೂರು: ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಅವಿರೋಧ ಆಯ್ಕೆಯಾದ ಕಾಂಗ್ರೆಸ್‌ನ ಬಸನಗೌಡ ಬಾದರ್ಲಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ವಿಧಾನಸೌಧ, ಚಾಲುಕ್ಯ ವೃತ್ತದ ಸುತ್ತಮುತ್ತ ಬ್ಯಾನರ್‌, ಫ್ಲೆಕ್ಸ್‌ಗಳನ್ನು ಹಾಕಿದ್ದಕ್ಕೆ ಡಿಸಿಎಂ ಶಿವಕುಮಾರ್‌ ಗರಂ ಆಗಿದ್ದಲ್ಲದೆ, ಯುವ ಕಾಂಗ್ರೆಸ್‌ ಅಧ್ಯಕ್ಷ ನಲಪಾಡ್‌ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅಲ್ಲದೆ ಕೇಸ್‌ ಹಾಗೂ ಫೈನ್‌ ಹಾಕಲು ಸೂಚನೆ ನೀಡಿದ್ದಾಗಿಯೂ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next