Advertisement

ರೈತರ ಹಿತಕ್ಕಾಗಿ ಕೆಲಸ ಮಾಡುವೆ, ಪಲಾಯನ ಮಾಡಲ್ಲ: ಎಚ್ ಡಿಕೆ

10:17 AM May 23, 2018 | Team Udayavani |

ಬೆಂಗಳೂರು: ರೈತರ ಹಿತಕ್ಕಾಗಿ ನಾನು ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಪಲಾಯನ ಮಾಡುವುದಿಲ್ಲ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಬುಧವಾರ ಸಂಜೆ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ ಪ್ರಮಾನವಚನ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದೆ.

ಈ ಹಿನ್ನೆಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇನೆ ಎಂದರು. ರಾಜ್ಯದ ಜನರ ನಿರೀಕ್ಷೆಯಂತೆ ಕೆಲಸ ಮಾಡುವುದಾಗಿ ಹೇಳಿದರು.

ಚಾಮುಂಡಿ ಬೆಟ್ಟಕ್ಕೆ ಎಚ್ ಡಿಕೆ ಭೇಟಿ:

ನಿಯೋಜಿತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಪತ್ನಿ ಅನಿತಾಕುಮಾರಸ್ವಾಮಿ ಜತೆ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದು, ಅಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next